Sat,May18,2024
ಕನ್ನಡ / English

ಶುರುವಾಗಿದೆ ಯಲ್ಲಾಪುರ ಜಾತ್ರೆ ಸಂಭ್ರಮ

08 Feb 2018
921

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜಾತ್ರೆಗಳ ಸರಾವಳಿ, ಹೌದು ಜಿಲ್ಲೆಯಲ್ಲಿ ಒಂದರ ಹಿಂದೆ ಒಂದಂತೆ ಜಾತ್ರೆಗಳ ಸರಮಾಲೆ. ರಾಜ್ಯದ ಪ್ರಮುಖ ಜಾತ್ರೆಯಲ್ಲೊಂದಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ದೇವಮ್ಮ ಮತ್ತು ದುರ್ಗಮ್ಮ ದೇವಿಯ ಜಾತ್ರೆಗೆ ನಿನ್ನೆ ಫೆಬ್ರುವರಿ 07ರಂದು ಅತಿ ವಿಜೃಂಭಣೆಯಿಂದ ಪ್ರಾರಂಭವಾಗಿದೆ. ಈ ಜಾತ್ರೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಕ್ತಿ ದೇವತೆಗಳಾದ ದೇವಮ್ಮ ಮತ್ತು ದುರ್ಗಮ್ಮ ತಾಯಂದಿರ ಜಾತ್ರೆ. ಮೂರು ವರ್ಷಕ್ಕೊಮ್ಮೆ 9 ದಿನಗಳ ಕಾಲ ನಡೆಯಿಲಿರುವ ಜಾತ್ರೆಗೆ ನಿನ್ನೆ ವಿದ್ಯುಕ್ತವಾಗಿ ಚಾಲನೆಗೊಂಡಿದೆ. ಅಲಾಂಕರ ಭೂಷಿತೆ ದೇವಿಯರ ಮೂರ್ತಿಗಳನ್ನು ಜಾತ್ರಾ ಗದ್ದುಗೆಗೆ ಲಕ್ಷಾಂತರ ಭಕ್ತ ಸಮೂಹದ ಮದ್ಯೆ ಕರೆತರಲಾಯಿತು.
sirsi
ನಿನ್ನೆ ಸಂಜೆ ಹೊತ್ತಿಗೆ ಭಕ್ತರ ಮುಗಿಲು ಮುಟ್ಟುವ ಜೈಕಾರ ಘೋಷಣೆಗಳ ನಡುವೆ ದೇವಮ್ಮ_ದುರ್ಗಮ್ಮ ದೇವಿಯರ ವಿಗ್ರಹವನ್ನು ಮೂಲ ದೇವಾಲಯದಿಂದ ಹೊರಗೆ ತರಲಾಯಿತು. ಬೇರೆ ಜಾತ್ರೆಗೆ ಹೋಲಿಸಿದ್ರೆ ದೇವರನ್ನ ರಥದ ಮೇಲೋ ಅಥವಾ ಪಲ್ಲಕ್ಕಿಯ ಮೇಲೊ ಮೆರವಣಿಗೆ ಮಾಡೋದು ಸರ್ವೆ ಸಾಮಾನ್ಯ, ಆದರೆ ಯಲ್ಲಾಪುರ ಅಮ್ಮಂದಿರ ಜಾತ್ರೆಯಲ್ಲಿ ವಿಶೇಷ ಅಂದರೆ ದೇವಿಯ ವಿಗ್ರಹಗಳನ್ನು ಭಕ್ತರೆ ಶಿರದ ಮೇಲೆ ಹೊತ್ತು ತರುವುದು. ಈ ಪದ್ಧತಿಯಿಂದ ದೇವರ ಪಥದಲ್ಲಿ ಕಿಕ್ಕಿರಿದು ನೆರೆದಿದ್ದ ಭಕ್ತಸಮುಹವು ಅಕ್ಕ ತಂಗಿಯರಾದ ದೇವಮ್ಮ ದುರ್ಗಮ್ಮ ದೇವರ ವಿಗ್ರಹವನ್ನು ಅತೀ ಸುಲಭವಾಗಿ ಕಣ್ತುಂಬಿ ಕೊಳ್ಳಬಹುದು. ಮೈನವಿರೆರಿಸುವ ಈ ಸನ್ನಿವೇಶ ನೋಡಲು ಪ್ರತಿವರ್ಷದಂತೆ ಈ ವರ್ಷವೂ ಸಾವಿರಾರು ಭಕ್ತರು ನೆರೆದಿದ್ದರು.
sirsi
ಸಾವಿರಾರು ಭಕ್ತರ ಅತೀ ಭವ್ಯ ಮೆರವಣಿಗೆಯಲ್ಲಿ ಹೊತ್ತುತಂದ ವಿಗ್ರಹಗಳನ್ನು ರಾಷ್ಟೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮೈದಾನದಲ್ಲಿ ಪ್ರತಿಷ್ಠಾಪಿಸಲಾಯಿತು. ಜಾತ್ರೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸಾರಿಗೆ ವ್ಯವಸ್ತೆಯನ್ನು ಮಾಡಲಾಗಿದ್ದು. ಸಿಹಿ ತಿಂಡಿ, ಮಕ್ಕಳ ಆಟಿಕೆ ಸಾಮಗ್ರಿ, ಮಹಿಳೆಯರ ಮಾರಾಟ ಮಳಿಗೆ, ಸರ್ಕಸ್ ಇತ್ಯಾದಿಗಳು ಜಾತ್ರೆಯ ಆಕರ್ಷಣೆಯಾಗಿದೆ. ಜಾತ್ರೆಗೆ ಬರುವ ಭಕ್ತಾದಿಗಳಿಗಾಗಿ ಸುತ್ತಮುತ್ತಲಿನ ಊರಿಗೆ ವಿಶೇಷ ಬಸ್ ವ್ಯವಸ್ತೆಯನ್ನು ಸಹ ಸಾರಿಗೆ ಸಂಸ್ಥೆ ಮಾಡಿದೆ ಎಂದು ತಿಳಿದುಬಂದಿದೆ. ಉದ್ಯೋಗ, ವ್ಯಾಪಾರವನ್ನರಸಿ ಯಲ್ಲಾಪುರ ಬಿಟ್ಟು ಬೇರೆ ಊರಲ್ಲಿ ನೆಲೆಯುರಿದವರಿಗಂತೂ ಈ ಜಾತ್ರೆ ತಮ್ಮ ಊರಿಗೆ ಬೇಟಿ ನೀಡಲು ಉತ್ತಮ ಸಂದರ್ಭವಾಗಿದ್ದು, ಊರೆಲ್ಲ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

English summary :Yellapur festival of goddess Devamma and Durgamma have began

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...