ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಿಎಂ ಬಾಲಸೇವಾ ಯೋಜನೆ ಘೋಷಣೆ | ಜನತಾ ನ್ಯೂಸ್
ಬೆಂಗಳೂರು : ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಅನಾಥ ಮಕ್ಕಳಿಗೆ ಬಾಲಸೇವಾ ಯೋಜನೆ ಆರಂಭಿಸುವದಾಗಿ ಘೋಷಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ. ನೀಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ.
ಕೊರೊನಾ ಎರಡನೇ ಅಲೆಯಿಂದ ಬಹಳಷ್ಟು ಸಾವು ನೋವು ಸಂಭವಿಸಿದೆ. ಹಲವು ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಅಂಥವರಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಎಂ ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ.
ತಂದೆ-ತಾಯಿ, ಏಕ ಪೋಷಕರು, ದತ್ತು ಪೋಷಕರು, ಕಾನೂನು ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ವಿವಿಧ ನೆರವುಗಳ ಘೋಷಣೆ ಮಾಡಿದರು. ವಿಸ್ತೃತ ಕುಟುಂಬದ ಸದಸ್ಯರ ಆರೈಕೆಯಲ್ಲಿರುವ ಮಕ್ಕಳಿಗೆ 3,500 ರೂ ಮಾಸಾಶನ ನೀಡಲಾಗುವುದು ಎಂದರು.
- ಪೋಷಕರು ಇಲ್ಲದ ಮಕ್ಕಳನ್ನು ನೊಂದಾಯಿತ ಮಕ್ಕಳ ಪಾಲನಾ ಕೇಂದ್ರಗಳಿಗೆ ದಾಖಲಿಸಿ ಆರೈಕೆ ಮಾಡಲಾಗುವುದು.
- ಅನಾಥ ಮಕ್ಕಳಿಗೆ ಕಿತ್ತೂರು ಚೆನ್ನಮ್ಮ, ಮೊರಾರ್ಜಿ ದೇಸಾಯಿಗಳಂಥ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.
- ಹತ್ತನೇ ತರಗತಿ ಮುಗಿಸಿದ ಮಕ್ಳಳ ಕೌಶಲ್ಯಾಭಿವೃದ್ಧಿ ಅಥವಾ ಉನ್ನತ ಶಿಕ್ಷಣಕ್ಕೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ತಿಳಿಸಿದರು.
- 21 ವರ್ಷ ಮೇಲ್ಪಟ್ಟ ಹೆಣ್ಣುಮಕ್ಳಳ ಮದುವೆ ಅಥವಾ ಉನ್ನತ ಶಿಕ್ಷಣಕ್ಕೆ 1 ಲಕ್ಷ ರೂ ಸಹಾಯ ಧನದ ನೆರವು ಘೋಷಿಸಿದರು.