Wed,Apr24,2024
ಕನ್ನಡ / English

ಯಡಿಯೂರಪ್ಪ ಎ1 ಆರೋಪಿ, ಮುಖ್ಯಮಂತ್ರಿಯೊಂದಿಗೆ ಅಧಿಕಾರಿಗಳನ್ನು ಸೇರಿಸಿ ಕೇಸ್ ಹಾಕ್ತಿನಿ | ಜನತಾ ನ್ಯೂಸ್

05 Jun 2021
2302

ಹಾಸನ : ರಾಜ್ಯದ ನೀರಾವರಿ ಇಲಾಖೆಯೊಂದರಲ್ಲೇ ಕೋಟಿ ಕೋಟಿ ಲೂಟಿ ನಡೆದಿದೆ. ಇದಕ್ಕೆ ಪೂರಕ ದಾಖಲೆ ನನ್ನ ಬಳಿ ಇದೆ, ಯಡಿಯೂರಪ್ಪ ಅವರನ್ನೇ ಎ1 ಮಾಡುತ್ತೇನೆ, ನಾನೇನು ಕೇರ್ ಮಾಡಲ್ಲ, ಕಾನೂನು ಹೋರಾಟ ಮಾಡುತ್ತೇನೆ. ಏನೇನು ನಡಿತಿದೆ ನೀರಾವರಿ ಇಲಾಖೆಯಲ್ಲಿ ಎಂದು ಗೊತ್ತಿದೆ. ಮುಖ್ಯಮಂತ್ರಿಯೊಂದಿಗೆ ಅಧಿಕಾರಿಗಳನ್ನು ಸೇರಿಸಿ ಕೇಸ್ ಹಾಕ್ತಿನಿ. ರಾಜ್ಯವನ್ನು ಬಿಜೆಪಿಗೆ ಅಡ ಇಟ್ಟಿದ್ದಾರಾ? ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ 3 ತಿಂಗಳಲ್ಲಿ 60 ಸಾವಿರ ಜನರಿಗೆ ಸೋಂಕು ತಗುಲಿದೆ. ಜಿಲ್ಲೆಯ ಬಗ್ಗೆ ಸರ್ಕಾರಕ್ಕೆ ನಿರ್ಲಕ್ಷ್ಯವಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಹೆಚ್‌.ಡಿ. ರೇವಣ್ಣ ಜಿಲ್ಲೆಯಲ್ಲಿ 2ನೇ ಅಲೆಯಲ್ಲಿ ಸಾವಿನ ಪ್ರಮಾಣ ಶೇ. 1.97 ರಷ್ಟಿದೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ನೀಡುವುದರಲ್ಲೂ ರಾಜಕೀಯ ಶುರುವಾಗಿದೆ.

ಕಾರ್ಖಾನೆಗಳ ಮಾಲೀಕರಿಂದ ಹಣ ಪಡೆದು ವ್ಯಾಕ್ಸಿನ್ ನೀಡಲಿ. ಸರ್ಕಾರದ ಉಚಿತ ವ್ಯಾಕ್ಸಿನ್ ಏಕೆ ಕೊಡಬೇಕು. ಹಳ್ಳಿಗಳಲ್ಲಿ ಇದು ವರೆಗೂ ಶೇ.10 ವ್ಯಾಕ್ಸಿನ್ ನೀಡಿಲ್ಲ, ಗ್ರಾಮೀಣ ಪ್ರದೇಶದಲ್ಲಿ ವ್ಯಾಕ್ಸಿನ್ ಇಲ್ಲ, ಇಂದು ಆಟೋ ಡ್ರೈವರ್​ಗಳಿಗೆ ಸರ್ಕಾರದಿಂದ ಲಸಿಕೆ ನೀಡಲಾಗುತ್ತಿದೆ.

ಬಿಜೆಪಿ ಶಾಸಕರ ಫೋಟೋ ಏಕೆ ಹಾಕಬೇಕಿತ್ತು. ಯಡಿಯೂರಪ್ಪ ಅವರ ಮನೆಯಿಂದ ಕೊಡುತ್ತಿದ್ದಾರಾ? ಎಂದು ಹೆಚ್‌.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಶಾಸಕರ ಎರಡು ಕೋಟಿ ಗ್ರಾಂಟ್​ ಹಣವನ್ನು ಕೊಡ್ತಿಲ್ಲಾ, ನೀರಾವರಿ ಇಲಾಖೆಯಲ್ಲಿ ನೂರಾರು ಕೋಟಿ ಲೂಟಿ ನಡೆಯುತ್ತಿದೆ. ಕಾನೂನುಗಳನ್ನು ಗಾಳಿಗೆ ತೂರಲಾಗುತ್ತಿದೆ.

ಆರು ಕೋಟಿ ಜನತೆಯ ತೆರಿಗೆ ಹಣದಿಂದ ವ್ಯಾಕ್ಸಿನ್ ಕೊಡುತ್ತಿದ್ದಾರೆ. ರೈತರನ್ನ ಯಾರೂ ಹೇಳೋರು ಕೇಳೋರು ಇಲ್ಲ, ಎಲ್ಲರ ಬಳಿ ಚಂದಾ ಎತ್ತಲು ಯಾಕೆ ಹೋಗಬೇಕು? ಲೂಟಿ ಹೊಡೆಯೋಕಾ? ಮುಖ್ಯಮಂತ್ರಿಗಳೇ ಹಣಕಾಸು ಮಂತ್ರಿ, ಆಮೇಲೆ ಅಧಿಕಾರಿಗಳು, ಅದೇನ್ ಮಾಡುತ್ತಾರೆ ನೋಡೋಣ. ಎಲ್ಲಾ ದಾಖಲೆಗಳನ್ನು ರೆಡಿ ಮಾಡುತ್ತಿದ್ದೇನೆ.

103 ಜನಕ್ಕೆ ಒಂದು ಕಾನೂನು, ಬಿಜೆಪಿ ಶಾಸಕರಿಗೆ ಒಂದು ಕಾನೂನು, ನಾನು ಹೇದರಿಕೊಂಡು ಓಡಿ ಹೋಗಲ್ಲ, ಸಿದ್ದರಾಮಯ್ಯ ಒಬ್ಬರೇ ಕೂಗಾಡುವ ಪರಿಸ್ಥಿತಿಯಿದೆ. ಕಾಂಗ್ರೆಸ್ ವಿರೋಧ ಪಕ್ಷ, ಅವರು ಏನು ಮಾತನಾಡುತ್ತಿಲ್ಲ ಈ ಪರಿಸ್ಥಿತಿ ಬಂದು ಹೋಗಿದೆ ರಾಜ್ಯದಲ್ಲಿ, ದೇವರು ಶಕ್ತಿಕೊಟ್ಟಾಗ ನಾನು ಕೆಲಸ ಮಾಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Revanna

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...