ಪತ್ನಿ ಸತ್ತಳೆಂದು ಪತಿ ಆತ್ಮಹತ್ಯೆ: ಮನನೊಂದು ಮಕ್ಕಳು ಆತ್ಮಹತ್ಯೆ | ಜನತಾ ನ್ಯೂಸ್
ಬೆಳಗಾವಿ : ಪತ್ನಿ ಸಾವಿನಿಂದ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಹೃದಯಾಘಾತದಿಂದ ಕಳೆದ ಒಂದು ವಾರದ ಹಿಂದೆ ಚನ್ನವ್ವ ರಂಗಾಪುರೆ(40) ಸಾವನ್ನಪ್ಪಿದ್ದರು. ಇದರಿಂದ ಮನನೊಂದು ಪತಿ ಕಾಡಪ್ಪ ಖಿನ್ನತೆ ಜಾರಿದ್ದರು, ಪತಿ ಕಾಡಪ್ಪ (42) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರು ಪುತ್ರಿಯರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕಾಡಪ್ಪ ರಂಗಾಪುರೆ (48), ಕೀರ್ತಿ (18) ಹಾಗೂ ಸ್ಫೂರ್ತಿ (16) ಮೃತರು. ಅಪ್ಪ ಮತ್ತು ಮಕ್ಕಳು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಗ್ರಾಮಸ್ಥರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ.
ಚಿಕ್ಕೋಡಿ ಡಿವೈಎಸ್ಪಿ ಮನೋಜ ನಾಯಕ, ಸಿಪಿಐ ಆರ್.ಆರ್. ಪಾಟೀಲ ಹಾಗೂ ಪಿಎಸ್ಐ ರಾಕೇಶ ಬಗಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.