ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಬೋರ್ಡ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ- ಜಗದೀಶ್ ಶೆಟ್ಟರ್ | ಜನತಾ ನ್ಯೂಸ್
ಹುಬ್ಬಳ್ಳಿ : ಸಿಎಂ ಬದಲಾಣೆ ಇಲ್ಲವೆಂದು ಸಚಿವರು ಮತ್ತು ಹೈಕಮಾಂಡ್ ಸ್ಪಷ್ಟನೆ ನೀಡಿದೆ. ಆದರು ಸಿಎಂ ಬದಲಾವಣೆ ಪ್ರಶ್ನೆ ಪದೇ ಪದೇ ಕೇಳಿ ಬರುತ್ತಿದೆ.
ಹುಬ್ಬಳ್ಳಿಯಲ್ಲಿ ಭಾನುವಾರ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡು ಓಡಾಡುವ ಸ್ಥಿತಿ ಬಂದಿದೆ ಎಂದು ಸಚಿವರಾದ ಜಗದೀಶ್ ಶೆಟ್ಟರ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಅರವಿಂದ ಬೆಲ್ಲದ ಪೋನ್ ಕದ್ದಾಲಿಕೆ ಹಾಗೂ ರಾಜಕೀಯ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಅರವಿಂದ ಬೆಲ್ಲದ ಬಗ್ಗೆ ನಾನು ಎನೂ ಮಾತನಾಡುವುದಿಲ್ಲ, ಅವರ ವಿಚಾರ ರಾಜ್ಯಮಟ್ಟದಲ್ಲಿ ಚರ್ಚೆ ಆಗಿದೆ. ಯಾರಾದ್ರು ಕೆಮ್ಮಿದ್ರೆ ಅದಕ್ಕೆ ನಾನು ಹೊಣೆ ಆಗಬೇಕಾದ ಪರಿಸ್ಥಿತಿ ಬಂದಿದೆ. ಯಾರ ಯಾರ ಹಣೆಯಲ್ಲಿ ಎನೂ ಇದೆ ಅದು ಆಗುತ್ತೆ ಎಂದರು.
ಇನ್ನು ಅರವಿಂದ ಬೆಲ್ಲದ ಓವರ್ ಟೇಕ್ ಮಾಡ್ತಾ ಇದಾರೆ ಅನ್ನೋ ಪ್ರಶ್ನೆಗೆ ಅದು ಅವರ ಸ್ವಭಾವ ಆಗಿದೆ. ಸದ್ಯ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ, ಸಿಎಂ ಸ್ಥಾನ ಖಾಲಿ ಇಲ್ಲ ಅಂತ ಬೋರ್ಡ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ ಎಂದರು.