Fri,May03,2024
ಕನ್ನಡ / English

ಯಡಿಯೂರಪ್ಪ ನೇತೃತ್ವದ ಸರ್ಕಾರ ಲೂಟಿ ಹೊಡೆಯುತ್ತಿದೆ, ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ | ಜನತಾ ನ್ಯೂಸ್

21 Jun 2021
2348

ಕೊಪ್ಪಳ : ನರೇಂದ್ರ ಮೋದಿ ಅಚ್ಛೇದಿನ್ ಬರುತ್ತೆ ಅಂದ್ರು, ಬಂದಿದೆಯಾ? ಯಡಿಯೂರಪ್ಪ ನೇತೃತ್ವದ ಸರ್ಕಾರ ಲೂಟಿ ಹೊಡೆಯುತ್ತಿದೆ. ಲೂಟಿ ಹೊಡೆಯುವುದನ್ನು ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ. ಯಡಿಯೂರಪ್ಪ, ಮಗ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ, ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಎಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್​ ಆರೋಪ ಮಾಡ್ತಿದ್ದಾರೆ. ಮೋದಿ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಬೆಲೆ ಹೆಚ್ಚಳವಾಗಿದೆ ಎಂದು ಕೊಪ್ಪಳದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರವಿಂದ ಬೆಲ್ಲದ ಫೋನ್ ಟ್ಯಾಪಿಂಗ್ ಪ್ರಕರಣ ತನಿಖೆಯಾಗಬೇಕು. ತನಿಖೆಗೆ ನಾನು ಒತ್ತಾಯ ಮಾಡಿದ್ದೇನೆ. ಇನ್ನೊಬ್ಬರ ಫೋನ್ ಕದ್ದಾಲಿಕೆ ಮಾಡೋ ಅಧಿಕಾರ ಯಾರಿಗೂ ಇಲ್ಲ. ಸರ್ಕಾರಕ್ಕಾಗಲಿ, ಪೊಲೀಸರಿಗಾಗಲಿ ಅಧಿಕಾರ ಇಲ್ಲ. ಈ ಹಿಂದೆ ರಾಮಕೃಷ್ಣ ಹೆಗಡೆ ಸಮಯದಲ್ಲಿ ಏನಾಗಿದೆ ಗೊತ್ತಿದೆಯಲ್ಲ? ಇದು ಗಂಭೀರವಾದ ವಿಚಾರ, ಇದು ಯಾವುದೇ ಪಕ್ಷದವರಾಗಲಿ ಯಾರೇ ಆಗಲಿ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡೋ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೊರೊನಾ ಎರಡನೇ ಅಲೆಯಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದವು. ಇದಕ್ಕೆಲ್ಲ ಸಿಎಂ ಯಡಿಯೂರಪ್ಪ ಅವರೇ ಕಾರಣ. ಕೊರೊನಾ ಎರಡನೇ ಅಲೆಯ ಮುಂಜಾಗ್ರತೆ ಕ್ರಮ ಕೈಗೊಂಡಿದ್ದರೆ ಅತಿ ಹೆಚ್ಚು ಸಾವು ಸಂಭವಿಸುತ್ತಿರಲಿಲ್ಲ. ವೆಂಟಿಲೇಟರ್, ಬೆಡ್, ಆಕ್ಸಿಜನ್ ಬೆಡ್, ರೆಮ್ಡಿಸಿವರ್ ಇಂಜೆಕ್ಚನ್ ಸಿಗದೆ ಜನ ಸಾವನ್ನಪ್ಪಿದರು.

ಚಾಮರಾಜನಗರದಲ್ಲಿ 36 ಜನ ಆಕ್ಸಿಜನ್ ಸಿಗದೆ ಸತ್ತರು. ಅವರಿಗೆ ಆಕ್ಸಿಜನ್ ಸರ್ಕಾರ ಕೊಟ್ಟಿದ್ದರೆ 36 ಜನರ ಪ್ರಾಣ ಉಳಿಯುತ್ತಿತ್ತು. ಆದರೆ, ಸರ್ಕಾರದವರು ಹಸಿ ಸುಳ್ಳು ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಚಾಮರಾಜನಗರ ದುರಂತದ ಬಗ್ಗೆ ನಾನು ನ್ಯಾಯಾಂಗ ತನಿಖೆಗೆ ಒತ್ತಾಯ ಮಾಡಿದೆ. ಆದರೆ, ತನಿಖೆ ಮಾಡಿಸಲಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಇರಕೂಡದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವರ ಸರ್ಕಾರದಲ್ಲಿ ಎಷ್ಟು ಕೆಜಿ ಕೊಡುತ್ತಿದ್ದಾರೆ ? ನಾನು ಕೊರೊನಾ ಸಂಧರ್ಭದಲ್ಲಿ ಸಿಎಂ ಆಗಿದ್ದರೆ ಪ್ರತಿ ಒಬ್ಬರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದೆ.

ಕೊರೊನಾ ಬರುತ್ತದೆ ಎಂದು ಗೊತ್ತಿದ್ದರೂ ನಿರ್ಲಕ್ಷ್ಯ ಮಾಡಿದರು. ನಿರ್ಲಕ್ಷ್ಯಕ್ಕೆ ಸಾವಿರಾರು ಜನ ಪ್ರಾಣ ಕಳೆದುಕೊಂಡರು. ಮೋದಿ ಅಚ್ಚೆ ದಿನ್ ಅಂತ ಹೇಳಿದ್ದರು. ಕೇಂದ್ರದಲ್ಲಿ ಬಿಜೆಪಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಡಬಲ್ ಇಂಜಿನ್ ಸರ್ಕಾರ ಬಂದ್ರೆ ಸ್ವರ್ಗ ಬರುತ್ತದೆ ಅಂತ ಹೇಳಿದ್ದರು. ಈಗ ಸ್ವರ್ಗ ಬಂತಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿ ಬಂದ ಮೇಲೆ ಎಲ್ಲ ಬೆಲೆ ಹೆಚ್ಚಾಗಿದೆ. ನಾಲ್ಕು ಸಾವಿರಕ್ಕೆ ಜೀವನ ಸಾಗಿಸೋ ಕುಟುಂಬಕ್ಕೆ ಹತ್ತು ಸಾವಿರ ಬೇಕಾಗಿದೆ. ಇಂತಹ ಕೆಟ್ಟ ಸರ್ಕಾರ ಈಗ ಅಸ್ತಿತ್ವದಲ್ಲಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬಗ್ಗೆ ಚರ್ಚೆಯಾಗುತ್ತಿಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆ ಇಲ್ಲ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ಸಿಸ್ಟಂ ಇದೆ. ಚುನಾವಣೆ ಮುಗಿದ ಬಳಿಕ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಯಾರೋ ವೈಯಕ್ತಿಕ ಅಭಿಪ್ರಾಯ ಹೇಳಿದ ತಕ್ಷಣ ಅದು ಪಕ್ಷದ ಅಭಿಪ್ರಾಯ ಅಲ್ಲ. ಇದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೊದಲು, 4 ಸಾವಿರದಲ್ಲಿ ಜೀವನ ಸಾಗಿಸುತ್ತಿದ್ದವರಿಗೆ 10,000 ರೂಪಾಯಿ ಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ದುಸ್ತರವಾಗಿದೆ. ದೇಶ, ರಾಜ್ಯದಲ್ಲಿ ಇಂತಹ ಕೆಟ್ಟ ಸರ್ಕಾರವಿದೆ. ಅನುದಾನ ಕೇಳಿದರೆ ಸಿಎಂ ಬಿಎಸ್​ವೈ ಕೊರೊನಾ ಅಂತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

RELATED TOPICS:
English summary :Koppala

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...