ಪತ್ನಿ ಸಾವನ್ನಪ್ಪಿದ ಕೆಲವೇ ಗಂಟೆಯಲ್ಲಿ ಕೊರೊನಾಗೆ ಪತಿಯೂ ಬಲಿ | ಜನತಾ ನ್ಯೂಸ್
ಮಂಗಳೂರು : ಕೋವಿಡ್ ಮಹಾಮಾರಿಗೆ ತುತ್ತಾಗಿ ಪತ್ನಿ ಕೊನೆಯುಸಿರೆಳೆದ ಗಂಟೆಗಳ ಅಂತರದಲ್ಲೇ ಪತಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆರಿಯ ಗ್ರಾಮದಲ್ಲಿ ನಡೆದಿದೆ.
ಮತರನ್ನು ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ (58) ಹಾಗೂ ಅವರ ಪತಿ ಇಬ್ರಾಹಿಂ (68) ಎಂದು ಗುರುತಿಸಲಾಗಿದೆ.
ಗಂಡ ಹೆಂಡತಿ ಇಬ್ಬರಿಗೂ ಜೂನ್ 19ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸಾರಮ್ಮ ಅವರನ್ನು ಮೊದಲು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದ್ದು, ಬಳಿಕ ಪತಿ ಇಬ್ರಾಹಿಂ ಹೃದಯ ಸಂಬಂಧಿ ಕಾಯಿಲೆ ತೀವ್ರಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ನೆರಿಯ ಗ್ರಾಮದ ಪರಂದಾಡಿ ನಿವಾಸಿ ಸಾರಮ್ಮ ಅವರು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 22 ನೇ ಮಂಗಳವಾರ ಮೃತಪಟ್ಟರೆ, ಅವರ ಪತಿ ಇಬ್ರಾಹಿಂ ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ ಇದೀಗ ದಂಪತಿ ಪುತ್ರ ಅಬ್ದುಲ್ ಖಾದರ್ ಅವರಿಗೂ ಕೋವಿಡ್ ದೃಢಪಟ್ಟಿದೆ.