ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನ ಎಂಬುದು ಮೂರ್ಖತನದ ಹೇಳಿಕೆ : ಕೆ.ಎಸ್.ಈಶ್ವರಪ್ಪ | ಜನತಾ ನ್ಯೂಸ್
ಶಿವಮೊಗ್ಗ : ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರಲ್ಲೇ ವಿರೋಧವಿದೆ ಎಂದು ಶಿವಮೊಗ್ಗ ನಗರದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಇವತ್ತು ಕಾಂಗ್ರೆಸ್ ನಲ್ಲಿ ಏನ್ ನಡೀತಾ ಇದೆ ಅವರಿಗೆ ಗೊತ್ತಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ಜಮೀರ್ ಅಹಮದ್ ಹೇಳಿದ್ರು ಅದನ್ನು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಇದು ಅವರ ಪಕ್ಷದ ವ್ಯವಸ್ಥೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಸಿಎಂ ಎಂಬ ವಿಚಾರ ಮೂರ್ಖತನದ್ದು. ಸದ್ಯ ಸಿದ್ದರಾಮಯ್ಯ ಪರಿಸ್ಥಿತಿ ಹೇಗಿದೆ ಎಂದರೆ ಕತ್ತಲೆಕೋಣೆಯಲ್ಲಿ ಇಲ್ಲದ ಕರಿಬೆಕ್ಕನ್ನು ಕಾಂಗ್ರೆಸ್ ಹುಡುಕ್ತಿದೆ. ಸಿಎಂ ಸ್ಥಾನ ಜೇಬಿನಲ್ಲಿದೆ ತೆಗೆದು ಒಂದೊಂದಾಗಿ ಎಲ್ಲರಿಗೂ ಕೊಟ್ಟಬಿಡಿ ಎಂದು ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಹಾಸ್ಯ ಮಾಡಿದ್ದಾರೆ.
ಸಿದ್ದರಾಮಯ್ಯಗೆ ವಿಪಕ್ಷ ಸ್ಥಾನ ಸಿಗುತ್ತಾ ಎಂಬುದೇ ಅನುಮಾನವಾಗಿದೆ. ಅಂಥದ್ದರಲ್ಲಿ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಇದು ಜನರ ನಡುವೆ ಹಾಸ್ಯಾಸ್ಪದವಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ ಮಾಡಿದ್ದಾರೆ.
ಕಾಂಗ್ರೆಸ್ ಸಿಎಂ ಕಿತ್ತಾಟದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದೆ. ಇನ್ನು ಎರಡು ವರ್ಷಗಳ ಕಾಲ ಅಧಿಕಾರ ಇದೆ. ಈ ನಡುವೆ ಡಿಕೆಶಿ ಮತ್ತು ಸಿದ್ದರಾಮಯ್ಯನವರು ಸಿಎಂ ಕುರ್ಚಿಗೆ ಬಿಗ್ ಫೈಟ್ ನಡೆಸುತ್ತಿದ್ದಾರೆ. ಇದನ್ನು ಗಮನಿಸಿದರೆ ಕಾಂಗ್ರೆಸ್ ನವರು ಕತ್ತಲ ಕೋಣೆಯಲ್ಲಿ ಇಲ್ಲದ ಕರಿ ಬೆಕ್ಕಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಅನಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೆ ಮುಖ್ಯಮಂತ್ರಿ ಖುರ್ಚಿ ಕನಸು ಕಾಣುವ ಮೊದಲು ಸಿದ್ದರಾಮಯ್ಯ ಸೇರಿ ಎಲ್ಲರೂ ಗೆದ್ದು ಬರಬೇಕು. ಅವರ ಪಕ್ಷಕ್ಕೆ ಬಹುಮತ ಬರಬೇಕು. ಅವರ ಶಾಸಕರು ಒಪ್ಪಿಗೆ ಕೊಡಬೇಕು. ನಂತರ ಕೇಂದ್ರದ ನಾಯಕರು ತೀರ್ಮಾನ ಮಾಡಬೇಕು. ಕಾಂಗ್ರೆಸ್ ಶಾಸಕರಾದ ಜಮೀರ್, ರಾಮಪ್ಪ, ಅಖಂಡ ಶ್ರೀನಿವಾಸ್ ಮೂರ್ತಿ ಅವರುಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿದ ತಕ್ಷಣ ಸಿಎಂ ಆಗುವುದಕ್ಕೆ ಏನು ಮುಖ್ಯಮಂತ್ರಿ ಸ್ಥಾನ ಅವರ ಜೇಬಿನಲ್ಲಿ ಇದೆಯಾ ಎಂದು ಲೇವಡಿ ಮಾಡಿದರು.