Sun,May05,2024
ಕನ್ನಡ / English

ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ: ಸ್ವಂತ ಅತ್ತಿಗೆಯನ್ನೇ ಕೊಂದ ಮಾಲ? | ಜನತಾ ನ್ಯೂಸ್

28 Jun 2021
1611

ಬೆಂಗಳೂರು : ರಾಜಕೀಯ ಹಿಡಿತ ಸಾಧಿಸಲು ರೇಖಾ ಕೊಲೆ ಮಾಡಿಸಿರೋದನ್ನ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಬಡ ಜನರಿಗೆ ಊಟ ವಿತರಿಸುತ್ತಿರುವಾಗಲೇ ಜೂ.24ರಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ನನ್ನು ಅವರ ಕಚೇರಿ ಬಳಿಯೇ ಅಟ್ಟಾಡಿಸಿ ಕೊಂದ ಪೀಟರ್ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

2018ರಲ್ಲಿ ಕದಿರೇಶ್ ಹತ್ಯೆ ಮಾಡಿದ್ದ ಶೋಭನ್ ಗ್ಯಾಂಗ್​ಗೆ ರೇಖಾ ನೆರವು ನೀಡಿದ್ದಳು. ಇದೇ ವಿಚಾರಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾಗಿ ಪ್ರಮುಖ ಆರೋಪಿ ಪೀಟರ್ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಕದಿರೇಶ್ ಜತೆ ಓಡಾಡಿಕೊಂಡಿದ್ದ ಪೀಟರ್​ಗೆ ಯಾವುದಕ್ಕೂ ಕೊರತೆ ಇರಲಿಲ್ಲ. ಕದಿರೇಶ್ ಹತ್ಯೆಯಾದ ಬೆನ್ನಲ್ಲೇ ರೇಖಾ ಯಾವುದೇ ನೆರವನ್ನು ನೀಡದೆ ಪೀಟರ್​ನನ್ನು ದೂರ ಇಟ್ಟಿದ್ದಳು. ಜೀವನ ನಿರ್ವಹಣೆಗೂ ಕಷ್ಟವಾದಾಗ ರೇಖಾ ಮೇಲೆ ಆಕ್ರೋಶಗೊಂಡಿದ್ದ. ಅದನ್ನು ತಿಳಿದಿದ್ದ ಕದಿರೇಶ್ ಅಕ್ಕ ಮಾಲಾ ಹಾಗೂ ಇತರರು ಪೀಟರ್​ನನ್ನು ದಾಳವಾಗಿ ಬಳಸಿಕೊಂಡು ತಮ್ಮ ದಾರಿಗೆ ಅಡ್ಡವಾಗಿದ್ದ ರೇಖಾಳನ್ನು ಮುಗಿಸಲು ಆತನಿಗೆ ಆಮಿಷವೊಡ್ಡುತ್ತಿದ್ದರು.

ಜೊತೆಗೆ ಆಡಳಿತ ಹಾಗೂ ಉಳಿದ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿದ್ದ ಕದಿರೇಶ್, ಅಕ್ಕ, ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು. ಕದಿರೇಶ್ ಕೊಲೆಯಾದ ನಂತರ ರೇಖಾ, ಪತಿ ಮನೆಯವರನ್ನು ದೂರವಿಟ್ಟಿದ್ದರು. ಕದಿರೇಶ್ ಆಸ್ತಿಯನ್ನು ರೇಖಾ ಮಾತ್ರ ಅನುಭವಿಸುತ್ತಿದ್ದಾರೆಂಬ ಕಾರಣಕ್ಕೆ ಮಾಲಾ ಗಲಾಟೆ ಮಾಡುತ್ತಿದ್ದಳು. ಇತ್ತೀಚೆಗೆ ಮಾಲಾ ಸಂಬಂಧಿಯೊಬ್ಬರ ಕಪಾಳಕ್ಕೆ ರೇಖಾ ಹೊಡೆದಿದ್ದರು. ಇದು ವೈಷಮ್ಯಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಮುಂಬರುವ ಬಿಬಿಎಂಪಿ ಚುನಾವಣೆಗೆ ನಿಲ್ಲಲು ರೇಖಾ ಕದಿರೇಶ್ ಸಿದ್ಧವಾಗಿದ್ದರು. ಈ ಬಾರಿಯೂ ಬಿಜೆಪಿಯಿಂದಲೇ ರೇಖಾಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿತ್ತು. ಇತ್ತ ಮಾಲಾ ಬಿಎಸ್​ಪಿಯಿಂದ ಚುನಾವಣೆ ಸ್ಪರ್ಧಿಸಲು ಚಿಂತಿಸಿದ್ದಳು. ತನಗೆ ಆಗದಿದ್ದರೆ ಮಗಳು ಕಸ್ತೂರಿ ಅಥವಾ ಅರುಳ್ ಪತ್ನಿ ಪೂರ್ಣಿಮಾಳನ್ನು ನಿಲ್ಲಿಸಲು ತಯಾರಿ ಮಾಡಿದ್ದಳು.

ಆದರೆ ಏರಿಯಾದಲ್ಲಿ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿದ್ದ ರೇಖಾ ಮೀರಿ ಚುನಾವಣೆಗೆ ನಿಲ್ಲೋದು ಕಷ್ಟದ ಮಾತಾಗಿತ್ತು. ಹಾಗಾಗಿ ರೇಖಾ ಜೊತೆಗೇ ಇದ್ದ ಪೀಟರ್ ಬಳಸಿ ರೇಖಾ ಕಥೆಯನ್ನೇ ಮುಗಿಸೋ ಪ್ಲ್ಯಾನ್ ಮಾಡಿಕೊಂಡಿದ್ರು.

ಪ್ರಮುಖ ಆರೋಪಿ ಪೀಟರ್ ಹಾಗೂ ಸೂರ್ಯನ ಜತೆ ಸೇರಿ ರೇಖಾ ಕೊಲೆಗೆ ಒಳಸಂಚು ರೂಪಿಸಿದ್ದರು. ಹತ್ಯೆಯಲ್ಲಿ ಮಾಲಾ ಹಾಗೂ ಈಕೆಯ ಪುತ್ರ ಅರುಳ್ ಭಾಗಿಯಾಗಿರುವುದು ತನಿಖೆಯಲಿ ದೃಢಪಟ್ಟಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ರೇಖಾ ಹತ್ಯೆಗೆ ಕೇವಲ ರಾಜಕೀಯ ಕಾರಣನಾ? ಅಥವಾ ಬೇರೇನಾದ್ರೂ ಕಾರಣಗಳಿವೆಯಾ ಅಂತಾ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

RELATED TOPICS:
English summary :Rekha Kadiresh

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...