Sun,May19,2024
ಕನ್ನಡ / English

ಏಷ್ಯಾದ ಅತಿ ಉದ್ದದ ಹೈಸ್ಪೀಡ್ ಟ್ರ್ಯಾಕ್ ಲೋಕಾರ್ಪಣೆ : ವಾಹನಗಳ ಹೈಸ್ಪೀಡ್ ಕಾರ್ಯಕ್ಷಮತೆ ಪರೀಕ್ಷೆ ಈಗ ಭಾರತದಲ್ಲೇ ಸಾಧ್ಯ | ಜನತಾ ನ್ಯೂಸ್

30 Jun 2021
1615

ಇಂದೋರ್ : ನ್ಯಾಟ್ರಾಕ್ಸ್- ಹೈ ಸ್ಪೀಡ್ ಟ್ರ್ಯಾಕ್(ಎಚ್‌ಎಸ್‌ಟಿ), ಏಷ್ಯಾದ ಅತಿ ಉದ್ದದ ಹೈಸ್ಪೀಡ್ ಟ್ರ್ಯಾಕ್ ಅನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ಇಂದು ಬುಧವಾರ ಉದ್ಘಾಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಅಡಿಯಲ್ಲಿ ಈ ಟ್ರ್ಯಾಕ್ ನಿರ್ಮಿಸಲಾಗಿದ್ದು, ಈಗ ಭಾರತದ ವಾಹನಗಳನ್ನು ಭಾರತದಲ್ಲಿಯೇ ಪರೀಕ್ಷಿಸಬಹುದಾದ ಕಾರಣದಿಂದ, ವಾಹನಗಳನ್ನು ವಿದೇಶಕ್ಕೆ ಕಳುಹಿಸುವ ಅಗತ್ಯವಿರುವುದಿಲ್ಲ. ಈ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಾಹನ ತಯಾರಕರು ಸಹ ತಮ್ಮ ವಾಹನಗಳನ್ನು ಈ ಬೃಹತ್ ಟ್ರ್ಯಾಕ್‌ನಲ್ಲಿ ಪರೀಕ್ಷಿಸಲು ಸಾಧ್ಯವಾಗಲಿದೆ.

ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಪ್ರಕಾಶ್ ಜಾವಡೇಕರ್ ಅವರು ಇಂದೋರ್‌ನಲ್ಲಿ ನ್ಯಾಟ್ರಾಕ್ಸ್- ಹೈ ಸ್ಪೀಡ್ ಟ್ರ್ಯಾಕ್(ಎಚ್‌ಎಸ್‌ಟಿ)ಯನ್ನು ಉದ್ಘಾಟಿಸಿದರು, ಇದು ಏಷ್ಯಾದ ಅತಿ ಉದ್ದದ ಟ್ರ್ಯಾಕ್ ಆಗಿದೆ. 1000 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿದ ನ್ಯಾಟ್ರಾಕ್ಸ್, ದ್ವಿಚಕ್ರ ವಾಹನಗಳಿಂದ ಹಿಡಿದು ಹೆವಿ ಟ್ರಾಕ್ಟರ್ ಟ್ರೇಲರ್‌ಗಳವರೆಗಿನ ವ್ಯಾಪಕ ವರ್ಗದ ವಾಹನಗಳಿಗೆ ಎಲ್ಲಾ ರೀತಿಯ ಹೈಸ್ಪೀಡ್ ಕಾರ್ಯಕ್ಷಮತೆ ಪರೀಕ್ಷೆಗಳಿಗೆ ಒಂದು ಸಂಪೂರ್ಣ ಪರಿಹಾರವಾಗಿದೆ.

ವಿಶ್ವ ದರ್ಜೆಯ 11.3 ಕಿ.ಮೀ ಹೈ ಸ್ಪೀಡ್ ಟ್ರ್ಯಾಕ್‌ನ ಇ-ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಜಾವಡೇಕರ್ ಅವರು, ಭಾರತವು ವಾಹನಗಳು, ಉತ್ಪಾದನೆ ಮತ್ತು ಬಿಡಿಭಾಗಗಳ ಕೇಂದ್ರವಾಗಲು ಉದ್ದೇಶಿಸಲಾಗಿದೆ, ಎಂದು ಹೇಳಿದರು. ಸಚಿವರು ಮಾತನಾಡಿ, ನಾವು ವೇಗವಾಗಿ "ಆತ್ಮನಿರ್ಭರ ಭಾರತ" ಕಡೆಗೆ ಸಾಗುತ್ತಿದ್ದೇವೆ ಮತ್ತು ಈ ದಿಕ್ಕಿನಲ್ಲಿ ಎಲ್ಲ ಸುತ್ತಿನ ಪ್ರಯತ್ನಗಳು ನಡೆಯುತ್ತಿವೆ. ಭಾರತವು ವಾಹನ ತಯಾರಿಕೆಯ ಕೇಂದ್ರವಾಗುವುದನ್ನು ಖಾತ್ರಿಪಡಿಸಿಕೊಳ್ಳುವ ಪ್ರಧಾನ ಮಂತ್ರಿಯ ಕನಸನ್ನು ಈಡೇರಿಸಲು ಅವರ ಸಚಿವಾಲಯ ಬದ್ಧವಾಗಿದೆ, ಎಂದು ಅವರು ಹೇಳಿದರು. ವಾಹನಗಳು ಮತ್ತು ಉತ್ಪಾದನಾ ಕೈಗಾರಿಕೆಗಳನ್ನು ವಿಸ್ತರಿಸುವುದರಿಂದ ಉದ್ಯೋಗ ಸೃಷ್ಟಿಸಲು ಸಹಾಯವಾಗುತ್ತದೆ, ಎಂದರು.

ದಶಕಗಳಿಂದ ನೆನೆಗುದಿಗೆ ಬಿದ್ದ ರೈಲ್ವೆ, ಹೆದ್ದಾರಿಗಳು ಮತ್ತು ಜಲಮಾರ್ಗಗಳಲ್ಲಿನ ಯೋಜನೆಗಳು ಇಂದು ಬಲವಾದ ರಾಜಕೀಯ ಇಚ್ಚಾಶಕ್ತಿಯಿಂದಾಗಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳುತ್ತಿವೆ, ಎಂದು ಸಚಿವರು ಹೇಳಿದರು.

RELATED TOPICS:
English summary :Asian longest high speed track inaugurated : Vehicles high speed performance test now possible in India

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...