ಜೆಡಿಎಸ್ ಬಿಟ್ಟ ಮೇಲೆ ಸಿದ್ದರಾಮಯ್ಯರಿಗೆ ಒಳ್ಳೆಯದೇ ಆಗಿದೆ: ತಂದೆ ಪರ ಮಗ ಯತೀಂದ್ರ | ಜನತಾ ನ್ಯೂಸ್
ಮೈಸೂರು : ಜೆಡಿಎಸ್ನಿಂದ ಹೊರಬಂದ ಮೇಲೆ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಳ್ಳೆಯದೇ ಆಗಿದೆ ಎಂದು ಅವರ ಪುತ್ರ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ತಂದೆ ಯಾವುದೇ ಪಾಪ ಮಾಡಿಲ್ಲ, ಸಿದ್ದರಾಮಯ್ಯ ತಾವಾಗಿ ಜೆಡಿಎಸ್ ಪಕ್ಷ ಬಿಡಲಿಲ್ಲ. ಜೆಡಿಎಸ್ನಲ್ಲಿ ಬೆಳೆಯುತ್ತಿದ್ದ ನಾಯಕರನ್ನು ಮೊಟಕುಗೊಳಿಸಲು ಉಚ್ಚಾಟನೆ ಮಾಡಲಾಯ್ತು. ಜೆಡಿಎಸ್ನಿಂದ ಹೊರಬಂದ ಮೇಲೆ ಸಿದ್ದರಾಮಯ್ಯ ಅವರಿಗೆ ತುಂಬಾ ಒಳ್ಳೆಯದೇ ಆಗಿದೆ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಆದರು, ಈಗಲೂ ಒಳ್ಳೆಯದೇ ಆಗುತ್ತಿದೆ. ಜೆಡಿಎಸ್ ಪಕ್ಷ ತನ್ನ ನೆಲೆ ಕಳೆದುಕೊಳ್ಳಲಿದೆ. ಮುಂದಿನ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಲಿದ್ದು ಅಧಿಕಾರಕ್ಕೆ ಬರುತ್ತದೆ ಎನ್ನುವ ವಿಶ್ವಾಸವನ್ನು ಕೂಡ ಯತೀಂದ್ರ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.