ಸರ್ಕಾರದ ಬಳಿ ಕೋವಿಡ್ ಲಸಿಕೆನೇ ಇಲ್ಲ, ಸುಳ್ಳು ಹೇಳ್ತಿದ್ದಾರೆ: ಸಿದ್ದರಾಮಯ್ಯ | ಜನತಾ ನ್ಯೂಸ್
ದಾವಣಗೆರೆ : ಸರ್ಕಾರದ ಬಳಿ ಲಸಿಕೆ ದಾಸ್ತಾನಿಲ್ಲ, ಹಾಗಾಗಿ ಸರಿಯಾಗಿ ಪೂರೈಕೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಶುಕ್ರವಾರ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಪ್ರಸಾದ ನಿಲಯದಲ್ಲಿ ಏರ್ಪಡಿಸಿದ್ದ ಉಚಿತ ಲಸಿಕಾ ಶಿಬಿರಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬಳಿ ಲಸಿಕೆಯೇ ಇಲ್ಲ. ದಾಸ್ತಾನು ಇದೆ ಎಂದು ಸರ್ಕಾರ ಹೇಳುತ್ತಿದೆ.
ಪ್ರತಿಯೊಬ್ಬರಿಗೂ ಲಸಿಕೆ ಕೊಡಿಸುವ ಕೆಲಸ ಸರ್ಕಾರದ್ದು. ಆದರೆ ಸರ್ಕಾರ ಅದನ್ನು ಸರಿಯಾಗಿ ನಿಭಾಯಿಸದ ಕಾರಣ ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ ಅವರು ತಮ್ಮ ಸ್ವಂತ ಹಣದಲ್ಲಿ ಲಸಿಕೆ ಹಾಕಿಸಿದ್ದಾರೆ ಎಂದರು.
ಸರ್ಕಾರದ ಬಳಿ ವ್ಯಾಕ್ಸಿನ್ ಇಲ್ಲ. ನಮ್ಮ ಹತ್ರ ಅಷ್ಟು ಇದೆ, ಇಷ್ಟು ದಾಸ್ತಾನು ಇದೆ ಅಂತ ಹೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.