ಅನ್ಲಾಕ್-3: ಕೊರೋನಾ ಸ್ಥಿತಿಗತಿಗಳ ಚರ್ಚೆಯ ಬಳಿಕ ನಾಳೆ ನಿರ್ಧಾರವಾಗಲಿದೆ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಹಂತಹಂತವಾಗಿ ಅನ್ಲಾಕ್ ಮಾಡಲಾಗುತ್ತಿದೆ. ಈಗಾಗಲೇ ಎರಡು ಹಂತದಲ್ಲಿ ಅನ್ಲಾಕ್ ಮಾಡಲಾಗಿದೆ. ಕೆಲವು ವಿಭಾಗಗಳನ್ನು ಹೊರತುಪಡಿಸಿ ಬಹುತೇಕ ಕ್ಷೇತ್ರಗಳಿಗೆ ಅವಕಾಶ ನೀಡಲಾಗಿದೆ.
ಅನ್ಲಾಕ್ 3 ಬಗ್ಗೆ ಮಾತನಾಡಿರುವ ಸಚಿವ ಬಸವರಾಜ್ ಬೊಮ್ಮಾಯಿ, ಕೋವಿಡ್ ಉಸ್ತುವಾರಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ನಾಳೆ ಸಭೆ ನಡೆಯಲಿದೆ. ಕೋವಿಡ್ ಸ್ಥಿತಿಗತಿ ಬಗ್ಗೆ ಸಂಪೂರ್ಣ ಚರ್ಚೆ ಮಾಡ್ತೀವಿ. ಅನ್ಲಾಕ್ 2 ಆದ್ಮೇಲೆ ಕೋವಿಡ್ ನಿರ್ವಹಣೆ ಏನೇನ್ ನಡೆಯುತ್ತಿದೆ ಎಂಬುದನ್ನು ಪರಿಶೀಲನೆ ಮಾಡಲಾಗುವುದು, ಆ ನಂತರ ಅನ್ಲಾಕ್ 3ರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
RELATED TOPICS:
English summary :Basavaraj Bommai