ಕಾರು ಮರಕ್ಕೆ ಡಿಕ್ಕಿಯಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹೊರಟಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ | ಜನತಾ ನ್ಯೂಸ್
ತುಮಕೂರು : ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲೆಂದು ಕಾರಿನಲ್ಲಿ ಶನಿವಾರ ಹೊರಟಿದ್ದ ಮೂವರು ಯುವಕರ ಪೈಕಿ ಇಬ್ಬರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೀಡಾಗಿ ದುರಂತ ಅಂತ್ಯಕಂಡ ಘಟನೆ ನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದೊಡ್ಡೇರಿ ಕಾಲೋನಿಯ ತಾಳೆಕೆರೆ ಗೇಟ್ ಬಳಿ ನಡೆದಿದೆ.
ತುಮಕೂರು ಹೊರಪೇಟೆ ಮೂಲದ ಪವನ್(24) ಮತ್ತು ಉದಯ್(23) ಮೃತ ದುರ್ದೈವಿಗಳಾಗಿದ್ದು, ಮಣಿಕಂಠ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಂಗಳೂರಿಗೆ ತೆರಳುವಾಗ ತಾಳೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಉದಯ್ ಮತ್ತು ಪವನ್ ಮೃತಪಟ್ಟಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.