Fri,Apr26,2024
ಕನ್ನಡ / English

ನಮ್ಮ ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ: ಯೋಗೇಶ್ವರ್ | ಜನತಾ ನ್ಯೂಸ್

04 Jul 2021
1501

ಮೈಸೂರು : "ಅಂಬಾರಿ ಹೊರಲು ಯಾವ ಆನೆ ಸೂಕ್ತವೆಂಬುದು ಮುಖ್ಯ. ಅಪ್ಪ ಅಂಬಾರಿ ಹೊತ್ತಿದ್ದ ಎಂದು ಮರಿಯಾನೆಗೆ ಹೊರಿಸಲು ಸಾಧ್ಯವಿಲ್ಲ. ಬದಲಾವಣೆ ಎಂಬುದು ಜಗದ ನಿಯಮ" ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸೂಚ್ಯವಾಗಿ ತಿಳಿಸಿದರು.

ನಮ್ಮ‌ಸರ್ಕಾರ ಬಂದರೂ ನಮ್ಮ ಸರ್ಕಾರ ಇದೆ ಎಂಬ ಭಾವನೆ ನಮಗಿಲ್ಲ. ನಮ್ಮ ಸರ್ಕಾರದಲ್ಲಿ ವಿಪಕ್ಷದವರ ಕೈ ಮೇಲಾಗ್ತಿದೆ. ಜಿಪಂ, ತಾಪಂ ಮೀಸಲಾತಿ ಸರ್ಕಾರ ಮಾಡಬೇಕು. ಆದರೆ ಕುಮಾರಸ್ವಾಮಿ ಹೇಳಿದಂತೆ ಮೀಸಲಾತಿ ಮಾಡಿದ್ದಾರೆ. ಅನುಕೂಲ‌ ಬಂದಂತೆ ಮೀಸಲಾತಿ ಹಂಚಿಕೆ‌ ಮಾಡಿದ್ದಾರೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ‌ ವಿರುದ್ದ ಬಹಿರಂಗ ಅಸಮಧಾನ ತೋಡಿಕೊಂಡರು.

ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವಂತದ್ದಲ್ಲ. ಸಿಎಂ ಅಂದರೆ ರಾಜ್ಯದ ಜನರ ಆಶೋತ್ತರ ಈಡೇರಿಸುವ ಮತ್ತು ಜನಪರ ಕಾಳಜಿಯಿರುವಂತಹ ಹುದ್ದೆ. ಮುಖ್ಯಮಂತ್ರಿ ಆದವರು ಸೃಜನಶೀಲರಾಗಿರಬೇಕು ಎಂದು ಸುದ್ದಿಗಾರರ ಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ.​ ಜನರು ದೇಗುಲಕ್ಕೆ ಹೋದರೆ ರಾಜಗೋಪುರಕ್ಕೆ ಕೈಮುಗಿಯುತ್ತಾರೆ. ರಾಜಗೋಪುರದ ಕೆಳಗಿನ ಚಪ್ಪಡಿಗಳು ಜನರಿಗೆ ಕಾಣುವುದಿಲ್ಲ. ಚಪ್ಪಡಿ ಕಲ್ಲಿನ ಮೇಲೆ ಚಪ್ಪಲಿಬಿಟ್ಟು ರಾಜಗೋಪುರ ನೋಡುತ್ತಾರೆ. ನಮ್ಮ ಸ್ಥಿತಿ ಚಪ್ಪಡಿ ಕಲ್ಲಿನಂತಾಗಿದೆ. ನಮ್ಮದೇ ಸರ್ಕಾರವಿದ್ದರೂ ಯಾವುದೇ ಉಪಯೋಗವಿಲ್ಲ.

ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಒತ್ತು ನೀಡುತ್ತಿಲ್ಲ. ಜಿ.ಪಂ., ತಾ.ಪಂ. ಚುನಾವಣೆಗೆ ಮೀಸಲಾತಿ ಪ್ರಕಟವಾಗಿದೆ. ಆದರೆ ಪ್ರತಿಪಕ್ಷ ನಾಯಕರಿಗೆ ಅನುಕೂಲವಾಗುವಂತೆ ಮೀಸಲಾತಿ ನೀಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ ಸಚಿವ ಸಿ.ಪಿ.ಯೋಗೇಶ್ವರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನನ್ನ ಹಣೆ ಬರಹ, ಏನ್ ಮಾಡುವುದು ದೇವಾಲಯದ ಗೋಪುರದ ಕಾರಂಜಿ ತರಹ ಆಗಿದ್ದೀನಿ. ವೈಯುಕ್ತಿಕವಾಗಿ ವಿಚಾರ ಇದ್ದರೆ ರುಜುವಾತು ಮಾಡಬೇಕು. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ವಿಜಯೇಂದ್ರಗೆ ಸರ್ಕಾರದಲ್ಲಿ ಯಾವುದೇ ಅಧಿಕೃತ ಹುದ್ದೆ‌ಇಲ್ಲ. ನಮಗಾಗುವ ಚಿತ್ರಹಿಂಸೆ ಯಾರಿಗೆ ಹೇಳುವುದು ಎಂದು ಬೇಸರ ತೋಡಿಕೊಂಡರು.

ಶ್ರೀರಾಮುಲು ಪಿಎ ವಿರುದ್ಧ ದೂರು ವಿಚಾರವಾಗಿ ಮಾತನಾಡಿದ ಅವರು, ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಕರೆದು ಹೆಳಬಹುದಿತ್ತು. ದೂರು ಕೊಡುವಂತಹ ಅಗತ್ಯವಿರಲಿಲ್ಲ‌ ಎಂದರು.

RELATED TOPICS:
English summary :Yogeshwar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...