Sun,May12,2024
ಕನ್ನಡ / English

ದೇಶದ ಕೋವಿನ್ ಫ್ಲಾಟ್-ಫಾರಂ 50 ದೇಶಕ್ಕೆ ಉಚಿತ : ಕೋವಿಡ್-19 ಜಾಗತಿಕ ಹೋರಾಟಕ್ಕೆ ಭಾರತ ಬದ್ಧ - ಪ್ರಧಾನಿ ಮೋದಿ | ಜನತಾ ನ್ಯೂಸ್

05 Jul 2021
2544

ನವದೆಹಲಿ : ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಲಸಿಕಾಕರಣ ಮಾನವೀಯತೆಯ ಅತ್ಯುತ್ತಮ ಭರವಸೆ, ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ವರ್ಚುವಲ್ ಕೋವಿನ್ ಗ್ಲೋಬಲ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾರತದ ಡಿಜಿಟಲ್ ವಿಧಾನವನ್ನು ಶ್ಲಾಘಿಸಿದರು ಮತ್ತು ನಾಗರಿಕರ ವ್ಯಾಕ್ಸಿನೇಷನ್ ಸ್ಥಿತಿಯನ್ನು ಪತ್ತೆಹಚ್ಚಲು ಅದರ ಮಹತ್ವವನ್ನು ಒತ್ತಿಹೇಳಿದ್ದಾರೆ.

ಭಾರತದಲ್ಲಿ ಯಶಸ್ವಿಯಾಗಿ ಲಸಿಕಾಕರಣಕ್ಕೆ ಬಳಸಲಾಗುತ್ತಿರುವ ಕೋವಿನ್ ಫ್ಲಾಟ್-ಫಾರಂ ಅನ್ನು ಡಿಜಿಟಲ್ ಸಾರ್ವಜನಿಕ ಹಿತದೃಷ್ಟಿಯಿಂದ ಇತರ ದೇಶಗಳಿಗೆ ತಮ್ಮದೇ ಆದ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ಚಲಾಯಿಸಲು, ಭಾರತವು ಉಚಿತವಾಗಿ ನೀಡಲಿದ್ದು, ಈ ಸಂದರ್ಭದಲ್ಲಿ ಕೋವಿನ್ ಗ್ಲೋಬಲ್ ಕಾನ್ಕ್ಲೇವ್‌ನಲ್ಲಿ ತಮ್ಮ ಆಲೋಚನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ.

ಕೆನಡಾ, ಮೆಕ್ಸಿಕೊ, ನೈಜೀರಿಯಾ, ಪನಾಮ ಮತ್ತು ಉಗಾಂಡಾ ಸೇರಿದಂತೆ ಸುಮಾರು 50 ದೇಶಗಳು ತಮ್ಮ ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ನಡೆಸಲು ಕೋವಿನ್ ಎಂಬ ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಅಳವಡಿಸಿಕೊಳ್ಳಲು ಆಸಕ್ತಿ ತೋರಿಸಿವೆ, ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ(ಎನ್‌ಎಚ್‌ಎ) ಸಿಇಒ ಡಾ.ಆರ್.ಎಸ್. ಶರ್ಮಾ ಇತ್ತೀಚೆಗೆ ಹೇಳಿದ್ದಾರೆ , ಓಪನ್ ಸೋರ್ಸ್ ಸಾಫ್ಟ್‌ವೇರ್ ಅನ್ನು ಉಚಿತವಾಗಿ ಹಂಚಿಕೊಳ್ಳಲು ಭಾರತ ಸಿದ್ಧವಾಗಿದೆ, ಎಂದು ತಿಳಿಸಿದ್ದಾರೆ. ವೇದಿಕೆಯ ಮುಕ್ತ ಮೂಲ ಆವೃತ್ತಿಯನ್ನು ರಚಿಸಲು ಮತ್ತು ಅದನ್ನು ಉಚಿತವಾಗಿ ಬಯಸುವ ಯಾವುದೇ ದೇಶಕ್ಕೆ ನೀಡುವಂತೆ ಪ್ರಧಾನಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಶರ್ಮಾ ಅವರು ಹೇಳಿದ್ದಾರೆ.

"ವ್ಯಾಕ್ಸಿನೇಷನ್ ಮಾನವೀಯತೆಯು ಸಾಂಕ್ರಾಮಿಕ ರೋಗದಿಂದ ಯಶಸ್ವಿಯಾಗಿ ಹೊರಹೊಮ್ಮುವ ಅತ್ಯುತ್ತಮ ಆಶಯವಾಗಿದೆ. ಮತ್ತು ಮೊದಲಿನಿಂದಲೂ, ಭಾರತದಲ್ಲಿ ನಾವು ನಮ್ಮ ವ್ಯಾಕ್ಸಿನೇಷನ್ ತಂತ್ರವನ್ನು ಯೋಜಿಸುವಾಗ ಸಂಪೂರ್ಣವಾಗಿ ಡಿಜಿಟಲ್ ವಿಧಾನವನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದ್ದೇವೆ" ಎಂದು ಪ್ರಧಾನಿ ಮೋದಿ ಹೇಳಿದರು.

ಭಾರತೀಯ ನಾಗರಿಕತೆಯು ಇಡೀ ಜಗತ್ತನ್ನು ಒಂದೇ ಕುಟುಂಬವೆಂದು ಪರಿಗಣಿಸುತ್ತದೆ ಮತ್ತು ಈ ತತ್ತ್ವಶಾಸ್ತ್ರದ ಮೂಲಭೂತ ಸತ್ಯವನ್ನು ಅನೇಕ ಜನರಿಗೆ ಅರಿತುಕೊಳ್ಳುವ ಹಾಗೆ ಸಾಂಕ್ರಾಮಿಕ ರೋಗವು ಮಾಡಿದೆ, ಎಂದು ಪ್ರಧಾನಿ ಮೋದಿ ಹೇಳಿದರು. ಈ
ಭಾರತೀಯ ತತ್ತ್ವಶಾಸ್ತ್ರದ ಆಧಾರದ ಮೇಲೆ, ಕೋವಿಡ್-19 ಲಸಿಕೆಗಾಗಿ ರಚಿಸಲಾದ ಭಾರತದ ತಂತ್ರಜ್ಞಾನ ವೇದಿಕೆಯನ್ನು ಮುಕ್ತ-ಮೂಲ(ಓಪನ್ ಸೊರ್ಸ್)ವನ್ನಾಗಿ ಮಾಡಲು ಸಿದ್ಧಪಡಿಸಲಾಗುತ್ತಿದೆ, ಎಂದು ಅವರು ಹೇಳಿದರು.

2019ರಿಂದ ಜಗತ್ತನ್ನು ಹಿಡಿದಿರುವ ಮಾರಕ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತ ಅಳವಡಿಸಿಕೊಂಡ ಜಾಗತಿಕ ವಿಧಾನವನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, ಭಾರತವು ತನ್ನ ಅನುಭವ, ಪರಿಣತಿ, ಸಂಪನ್ಮೂಲಗಳನ್ನು ಜಾಗತಿಕ ಸಮುದಾಯದೊಂದಿಗೆ ಕೋವಿಡ್-19ರ ಆರಂಭದಿಂದಲೇ ಹಂಚಿಕೊಳ್ಳಲು ಬದ್ಧವಾಗಿದೆ, ಎಂದು ಹೇಳಿದರು.

RELATED TOPICS:
English summary :COWIN flatform will be freely available for 50 nations : India committed in fight against COVID19 - PM Modi

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...