Sat,May18,2024
ಕನ್ನಡ / English

ಸುಮಲತಾಗೆ ಯಾರೂ ಇಲ್ಲ ಅಂದ್ಕೋಬೇಡಿ, ಜೂ. ರೆಬೆಲ್ ಸ್ಟಾರ್ ಇದ್ದಾನೆ: ರಾಕ್‍ಲೈನ್ ವೆಂಕಟೇಶ್ | ಜನತಾ ನ್ಯೂಸ್

09 Jul 2021
1324

ಬೆಂಗಳೂರು : ಸುಮಲತಾಗೆ ಯಾರೂ ಇಲ್ಲ ಅಂದುಕೊಂಡಿದ್ದೀರಾ? ನನ್ನಂತ ಸಾವಿರಾರು ಜನ ಸುಮಲತಾ ಜೊತೆ ಇದ್ದಾರೆ. ಜೂನಿಯರ್ ರೆಬೆಲ್ ಸ್ಟಾರ್ ಇದ್ದಾನೆ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಕ್ ಲೈನ್ ವೆಂಕಟೇಶ್, ಹೆಚ್.ಡಿ.ಕುಮಾರಸ್ವಾಮಿ ಅವರು ಅಂಬರೀಶ್ ವಿಚಾರವಾಗಿ ಮಾತನಾಡುವಾಗ ಪ್ರಜ್ಞೆ ಇರಲಿ, ಭ್ರಷ್ಟಾಚಾರ ಅಂಆರೆ ಮತ್ತೊಂದು ಕಡೆ ಸ್ನೇಹಿತ ಅಂತಾರೆ. ಚಿತ್ರರಂಗದ ಬಗ್ಗೆ ಮಾತನಾಡುತ್ತೀರಾ ಅಲ್ವಾ? ಚಿತ್ರರಂಗದಿಂದ ನೀವೂ ಲಾಭ ಮಾಡಿಕೊಂಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಂಬರೀಶ್ ವಿಷಯ ಮಾತಾಡೋವಾಗ ಪ್ರಜ್ಞೆ ಇಟ್ಟುಕೊಂಡು ಮಾತನಾಡಿ. ಚಿತ್ರರಂಗ ನಿಮಗೇನು ಮೋಸ ಮಾಡಿದೆ. ಹೇಗೆ ಲಾಭ ಮಾಡಿಕೊಂಡಿದ್ದೀರಾ ಎಲ್ಲರಿಗೂ ಗೊತ್ತು. ಯಾಕೆ ಚಿತ್ರರಂಗಕ್ಕೆ ಬೈತೀರಾ. ನೀವು ಸಿಎಂ ಆಗಿದ್ದಾಗ ಚಿತ್ರರಂಗಕ್ಕೆ ಏನ್ ಮಾಡಿದ್ದೀರಾ.? ಅಂಬರೀಶ್ ಮೇಲೆ ಯಾಕೆ ಇಷ್ಟು ಆಪಾದನೆ ಮಾಡ್ತಿದ್ದೀರಾ. ಅವರು ಬದುಕಿದ್ದಾಗ ಮಾತಾಡಬೇಕಿತ್ತು. ಅವರು ಹೋದ ಮೇಲೆ ಯಾಕೆ ಇಂತಹ ಹೇಳಿಕೆ ಕೊಡುತ್ತಿದ್ದೀರಾ? ಇದು ನಮಗೆ ಬೇಜಾರು ತರುವ ವಿಷಯವಾಗಿದೆ ಎಂದು ಕಿಡಿಕಾರಿದ್ದಾರೆ.

ಮಂಡ್ಯಕ್ಕೆ ಅಂಬರೀಷ್ ಅವರ ದೇಹವನ್ನು ಸೇನಾ ಹೆಲಿಕಾಪ್ಟರ್​​ನಲ್ಲಿ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿಯಾಗಿ ನಾನೇ ಸಹಾಯ ಮಾಡಿದೆ ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭಿಷೇಕ್​ ಒತ್ತಾಯ ಮಾಡಿ ತಮ್ಮ ತಂದೆ ಅಂಬರೀಷ್​ರ ಮೃತದೇಹವನ್ನ ತಾಯ್ನೆಲ ಮಂಡ್ಯಕ್ಕೆ ಕೊಂಡೊಯ್ಯಲು ಹೇಳಿದ್ರು. ಅಂಥದ್ದರಲ್ಲಿ ಸಾವಿನ ರಾಜಕಾರಣ ಯಾಕೆ ಮಾಡಲು ಹೋಗ್ತಿದ್ದೀರಾ..? ದಾರಿಯಲ್ಲಿ ಹೋಗ್ತಿದ್ದ ದಾಸಪ್ಪ ಸಿಎಂ ಆಗಿದ್ದರೂ ಆ ಕೆಲಸ ಮಾಡ್ತಿದ್ರು. ನೀವು ಮಾತನಾಡಿದ್ದು ತುಂಬಾ ನೋವಾಗುತ್ತೆ ಕುಮಾರಣ್ಣ. ಅಂಬಿ ಕುಟುಂಬಕ್ಕೆ ನಾನು ಎಷ್ಟು ಆಪ್ತ ಅನ್ನೋದು ನಿಮಗೂ ಗೊತ್ತು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜಕೀಯದ ವಿಚಾರದಲ್ಲಿ ನಾನು ಏನೂ ಮಾತಾಡೋದಿಲ್ಲ. ಆದ್ರೆ, ಅಂಬರೀಶ್ ಅಂದ್ರೆ ನಮಗೆ ಪ್ರಾಣ. ಹೀಗಿರುವಾಗ ಒಂದು ಕಡೆ ಅಂಬಿ ಅವರನ್ನು ಕುಮಾರಸ್ವಾಮಿ ಬೈತಾರೆ, ಮತ್ತೊಂದು ಕಡೆ ಹೊಗಳುತ್ತಾರೆ. ಈ ತರಹ ಮಾತಾಡೋಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ರಾಕ್‌ಲೈನ್ ಪ್ರಶ್ನಿಸಿದರು.

RELATED TOPICS:
English summary :Sumalatha Ambareesh

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...