Sat,May18,2024
ಕನ್ನಡ / English

ಕೆಲವರು ನಮ್ಮ ಧರ್ಮ ಅಂತಾರೆ, ನಿಮ್ಮ ಧರ್ಮ ನೀವು ಇಟ್ಕೊಳ್ಳಿ, ಬೇರೆ ಧರ್ಮ ವಿರೋಧ ಮಾಡಬೇಡಿ | ಜನತಾ ನ್ಯೂಸ್

13 Jul 2021
2621

ಬಾಗಲಕೋಟೆ : ಓದಿದವರು ಜಾತಿಗಳ ಬಗ್ಗೆ ಮಾತನಾಡಬಾರದುಸಮಾಜದಲ್ಲಿ ಜಾತಿ ವ್ಯವಸ್ಥೆ ಇದೆ. ಓದಿದವರು ಹಳ್ಳಿಯಲ್ಲಿ ಹೋಗಿ ಜಾತಿ ಮಾಡ್ತಾರೆ. ದಯವಿಟ್ಟು ಓದಿದವರು ಜಾತಿ ಮಾಡಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀತಿಪಾಠ ಮಾಡಿದರು.

ಕೆಲವರು ನಮ್ಮ ಧರ್ಮ ನಮ್ಮ ಧರ್ಮ ಅಂತಾರೆ, ನಿಮ್ಮ ಧರ್ಮ ನೀವು ಇಟ್ಕೊಳ್ಳಿ ಆದ್ರೆ ಬೇರೆ ಧರ್ಮ ವಿರೋಧ ಮಾಡಬೇಡಿ ಎಂದು ಪರೋಕ್ಷವಾಗಿ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಬಾದಾಮಿ ಕ್ಷೇತ್ರ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು.

ಬಾದಾಮಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಕ್ಕಳಿಗೆ ಟ್ಯಾಬ್ ವಿತರಿಸಿ ಮಾತನಾಡಿದ ಅವರು, ನೀವೆಲ್ಲ ಪದವಿ ಶಿಕ್ಷಣ ಪಡೆಯುತ್ತಿದ್ದೀರಿ ಮೊದಲು ಮನುಷ್ಯತ್ವ ಬೆಳೆಸಿಕೊಳ್ಳಿ. ಕೆರೂರನಲ್ಲಿ ಇಲ್ಲಿಯವರೆಗೆ ಪ್ರಥಮ ದರ್ಜೆ ಕಾಲೇಜ್ ಗೆ ಹೊಸ ಕಟ್ಟಡ ಇರಲಿಲ್ಲ. ಜಾಗ ಇಲ್ಲದ ಕಾರಣ ಕಟ್ಟಡ ಇರಲಿಲ್ಲ. ಕೆಐಎಡಿಬಿ ಇಂದ 29 ಎಕರೆ ಜಾಗ ಕೊಡಿಸಿದ್ದೀನಿ. ಅದು ಕೋರ್ಟ್‍ಗೆ ಹೋಗಿತ್ತು, ನಾನು ಹೈ ಕೋರ್ಟ್ ಗೆ ಹೋಗಿ ನಂತರ ಆ ಜಾಗ ಕೆಐಎಡಿಬಿಗೆ ಬಂತು. ನಾನು ಕೆಐಎಡಿಬಿಯಿಂದ ಕಾಲೇಜ್ ಗೆ 29 ಎಕರೆ ಜಾಗ ಕೊಡಿಸಿದ್ದೀನಿ, ದುಡ್ಡು ಕೊಡಿಸಿದ್ದೀನಿ. ನಾಳೆಯಿಂದಲೇ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ಕಟ್ಟಡ ಕಾಮಗಾರಿ ಆರಂಭವಾಗುತ್ತೆ ಎಂದರು.

ನಮ್ಮ ಜಾತಿ ನಮ್ಮ ಜಾತಿ ಅಂತ ಓದಿಕೊಂಡು ಹೋದವರೇ ಹಳ್ಳಿಯಲ್ಲಿ ಜಾತಿ ಮಾಡೋದು. ಬಸವಣ್ಣನವರ ವಚನ ಈಗ ಹೇಳೋ ಬದನೆಕಾಯಿ ಆಗಿಬಿಟ್ಟಿದೆ. ಇವನಾರವ ಇವನಾರವ ಅನ್ನೋದು. ಇವ ನಮ್ಮವ ಇವ ನಮ್ಮವ ಅನ್ರಪ್ಪ ಅಂದ್ರೆ, ನೀನು ಯಾವ ಜಾತಿಯವನಯ್ಯ ಯಾವ ಜಾತಿಯಲ್ಲಿ ಹುಟ್ಟಿದಿಯಪ್ಪ ಅನ್ನೋದು ಇದೆ.

ಇದು ಹೋಗಬೇಕು ಬಸವಣ್ಣನವರು ಎಂಟು ನೂರು ವರ್ಷಗಳ ಹಿಂದೆ ಹೇಳಿದ್ದಾರೆ. ಇವನಾರು ಇವನಾರು ಅಂತ ಕೇಳಬೇಡಯ್ಯ, ಇವರೆಲ್ಲ ನಮ್ಮವರು ನಮ್ಮವರು ಅಂತ ಅನ್ರಯ್ಯ ಅಂತ ಹೇಳಿದ್ದಾರೆ. ಶಿಕ್ಷಣ ಪಡೆಯೋದು ನಮ್ಮ ಜಾತಿಯವರು ಅನ್ನೋದಕ್ಕಾ?

ಮೌಢ್ಯಗಳು ಇರಬಾರದು, ಕಂದಾಚಾರ ಇರಬಾರದು ನಮ್ಮ ಸರ್ಕಾರದಲ್ಲಿ ಮೌಢ್ಯ ನಿಷೇಧ ತಂದಿದ್ವಿ. ಕೆಲವರು ಯಾಕಯ್ಯಾ ಬಟ್ಟೆ ಹರ್ದೋಗಿದೆ, ಚಡ್ಡಿ ಹರ್ದೋಗಿದೆ ಅಂದ್ರೆ ನಮ್ಮ ಹಣೆ ಬರಹ ಅಂತಾರೆ. ಒಂದು ವೇಳೆ ಹಣೆಯಲ್ಲಿ ಬರೆದಿದ್ದರೆ ದೇವರು ಚಡ್ಡಿ ಹಾಕೋಬೇಡ ಅಂತ ಬರೆದಿರುತ್ತಾನಾ. ಹಾಗೆ ಬರೆದರೆ ಅವನೆಂತ ದೇವರು? ಚಡ್ಡಿ ಇಲ್ದೆ, ಊಟ ಇಲ್ದೆ ಬದುಕು ಅಂದ್ರೆ ಅವನು ದೇವ್ರೇ ಅಲ್ಲ.

ಎಲ್ಲರಿಗೂ ರಕ್ಷಣೆ ಕೊಡೋನು ದೇವರು. ಎಲ್ಲರನ್ನೂ ಸಮಾನವಾಗಿ ಕಾಣುವವನು ದೇವರು. ಒಬ್ಬರಿಗೆ ಚಡ್ಡಿ ಇಲ್ಲ, ಒಬ್ಬರಿಗೆ ಅಂಗಿ ಇಲ್ಲ, ಒಬ್ಬರಿಗೆ ದೋತಿ ಇಲ್ಲ. ಇನ್ನ ಕೆಲವರಿಗೆ ಸೂಟ್ ಹಾಕೊಂಡಿರು ಅಂತ ಹಣೆ ಬರೆದಿದ್ದಾರೆ ದೇವರು? ಇದು ಮೂಢನಂಬಿಕೆ ಕಂದಾಚಾರ ಎಂದು ಮೌಢ್ಯ ಆಚರಣೆ ಕುರಿತು ಬೋಧನೆ ಮಾಡಿದರು.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...