ಪಾಕಿಸ್ತಾನದ ಎಲ್ಇಟಿ ಕಮಾಂಡರ್ ಸೇರಿ 3 ಉಗ್ರರ ಹೊಡೆದುರುಳಿಸಿದ ಭಾರತೀಯ ರಕ್ಷಣಾ ಪಡೆ | ಜನತಾ ನ್ಯೂಸ್
ಶ್ರೀನಗರ: : ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ಓರ್ವ ಉಗ್ರನನ್ನು ಪಾಕಿಸ್ತಾನದ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಸ್ಥಳೀಯರು ಎಂದು ತಿಳಿದುಬಂದಿದೆ.
ಕಾಶ್ಮೀರ ವಲಯ ಪೊಲೀಸರ ಪ್ರಕಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಒಳಗೊಂಡಂತೆ ತಪ್ಪಿಗೆ ಗುರಿ ಮಾಡುವ ಕೆಲ ವಸ್ತುಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಪ್ರಸ್ತುತ ರಕ್ಷಣಾ ಪಡೆಗಳ ಕಾರ್ಯಾಚರಣೆ ನಡೆಯುತ್ತಿದೆ.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.
ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.