ಟೋಕಿಯೊ ಒಲಿಂಪಿಕ್ಸ್: ಮೂಡಬಿದಿರೆ ಆಳ್ವಾಸ್ ಕಾಲೇಜಿನ ಇಬ್ಬರು ಕ್ರೀಡಾಪಟುಗಳು ಆಯ್ಕೆ | ಜನತಾ ನ್ಯೂಸ್
ಮಂಗಳೂರು : ಜಪಾನಿನ ಟೋಕಿಯೋದಲ್ಲಿ ಜು.23ರಿಂದ ನಡೆಯಲಿರುವ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಕ್ರೀಡಾ ವಿಭಾಗದ ದತ್ತು ಸ್ವೀಕಾರದಡಿ ಅಧ್ಯಯನ ನಡೆಸುತ್ತಿರುವ ಧನಲಕ್ಷ್ಮೀ ಮತ್ತು ಶುಭ ಇವರು ಆಯ್ಕೆಯಾಗಿದ್ದಾರೆ.
ಮೂಡಬಿದಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಡಾ. ಎಂ. ಮೋಹನ ಆಳ್ವ, ಸಂಸ್ಥೆಯ ಕ್ರೀಡಾ ವಿಭಾಗದ ಧನಲಕ್ಷ್ಮೀ ಮತ್ತು ಶುಭ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವುದು ಸಂಸ್ಥೆಗೆ ಹೆಮಮೆಯ ಸಂಗತಿ ಎಂದಿದ್ದಾರೆ.
ಧನಲಕ್ಷಿ ಹಾಗೂ ಶುಭ ಇವರು ಒಲಿಂಪಿಕ್ಸ್ಗೆ ಆಯ್ಕೆಯಾಗಿದ್ದಾರೆ. ಇವರು 4x400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 2016-17 ನೇ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾನಿಲಯ ಕೂಟಗಳಲ್ಲಿ ಇವರು ಪ್ರತಿನಿಧಿಸಿದ್ದರು ಎಂದು ಹೇಳಿದ್ದಾರೆ.
ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಸಾಧನೆ ಮಾಡಿರುವವರಿಗೆ ಕೊಡಮಾಡಿರುವಂತೆ, ಈ ಬಾರಿಯ ಒಲಿಂಪಿಕ್ಸ್ ಗೆ ಆಯ್ಕೆಯಾದ ಈ ಇಬ್ಬರು ಸಾಧಕ ಕ್ರೀಡಾ ವಿದ್ಯಾರ್ಥಿಗಳಿಗೂ ಸಂಸ್ಥೆಯಿಂದ ತಲಾ ರೂ. 1 ಲಕ್ಷ ದ ಪ್ರೋತ್ಸಾಹ ಧನ ನೀಡುವುದಾಗಿ ಅವರು ಹೇಳಿದ್ದಾರೆ.