Mon,May20,2024
ಕನ್ನಡ / English

ಆಸಿಡ್​ ದಾಳಿ, ನಾಲ್ವರಿಗೆ ಜೀವಾವಧಿ ಶಿಕ್ಷೆ: ಈ ತೀರ್ಪು ಉಸಿರಾಡುವಂತೆ ಮಾಡಿದೆ: ಸಂತ್ರಸ್ತೆ | ಜನತಾ ನ್ಯೂಸ್

15 Jul 2021
1257

ಶೃಂಗೇರಿ : ಶೃಂಗೇರಿ ಮಹಿಳೆ ಮೇಲೆ ಆಯಸಿಡ್ ದಾಳಿ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ರೂ. ದಂಡ ವಿಧಿಸಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಲಯ ತೀರ್ಪು ನೀಡಿದೆ.

ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ಈ ಆದೇಶ ಹೊರಡಿಸಿದ್ದು, ಆರೋಪಿಗಳಾದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37) ಅವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಶಿಕ್ಷೆಗೆ ಒಳಗಾದವರು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್. ಈ ನಾಲ್ವರು 2015ರ ಏಪ್ರಿಲ್ 18ರಂದು ಮೆಣಸೆಯಲ್ಲಿ ಮಹಿಳೆಯೊಬ್ಬರ ಮೇಲೆ ಆಸಿಡ್​ ದಾಳಿ ನಡೆಸಿದ್ದರು. 6 ವರ್ಷದಿಂದ ಸುದೀರ್ಘ ವಿಚಾರಣೆ ನಡೆದ ಬಳಿಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ತೀರ್ಪು ಪ್ರಕಟಗೊಂಡ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ ಸುಮನಾ, ಈ ತೀರ್ಪು ನನಗೆ ಉಸಿರಾಡುವ ಹಾಗೆ ಆಗಿದೆ. ಇಲ್ಲಿಯವರೆಗೆ ನಾನು ಸತ್ತಂಗೆ ಇದ್ದೆ, ಸದ್ಯ ನನಗೆ ತೃಪ್ತಿ ಸಿಕ್ಕಿದೆ ಎಂದಿದ್ದಾರೆ.

ಘಟನೆ -
ಗಣೇಶ್ ಎಂಬಾತ ಮದುವೆಯಾಗುವಂತೆ ವಿಚ್ಚೇದಿತ ಮಹಿಳೆ ಸುಮನಾಳ ಹಿಂದೆ ಬಿದ್ದಿದ್ದ. ಇವರಿಬ್ಬರೂ ಒಂದೇ ಗ್ರಾಮದ ನಿವಾಸಿಗಳಾಗಿದ್ದ ಕಾರಣ ಇವರಿಗೆ ಪರಿಚಯವಿತ್ತು. ಮಹಿಳೆ ಮದುವೆಯಾಗಲು ತಿರಸ್ಕರಿದಕ್ಕೆ ಗಣೇಶ ಆಕೆಗೆ ಬೆದರಿಕೆ ಹಾಕಿದ್ದ. ಗಣೇಶನ ಯಾವ ಬೆದರಿಕೆಗೂ ಮಹಿಳೆ ಬಗ್ಗಲಿಲ್ಲ ಎಂದು ಗಣೇಶ ತನ್ನ ಸ್ನೇಹಿತರ ಜೊತೆ ಸೇರಿ ಆಯಸಿಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ.

ಏಪ್ರಿಲ್ 18ರ ರಾತ್ರಿ ಮಹಿಳೆ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿ ಮನೆಗೆ ಮರಳುತ್ತಿರುವಾಗ ಹಿಂದಿನಿಂದ ಬೈಕ್ನಲ್ಲಿ ಬಂದ ಆರೋಪಿಗಳು ವಿಳಾಸ ಕೇಳುವ ಸೋಗಿನಲ್ಲಿ ಮಹಿಳೆಯನ್ನು ಮಾತನಾಡಿಸಿ ಆಯಸಿಡ್ ಎರಚಿ ಪರಾರಿಯಾಗಿದ್ದರು. ಆಯಸಿಡ್ ದಾಳಿಯಲ್ಲಿ ಮಹಿಳೆಯ ಬಲಗಣ್ಣು ಪೂರ್ಣ ಸುಟ್ಟಿದ್ದು ಎಡಗಣ್ಣು ಭಾಗಶಃ ಹಾನಿಯಾಗಿದೆ. ಮೈ ಕೈ ಕಾಲು ಸುಟ್ಟಿದೆ. ಈ ಸಂಬಂಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED TOPICS:
English summary :Shangeri

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...