ಕೃಷಿ ಇಲಾಖೆಯ ರಾಯಭಾರಿ ಸ್ಥಾನದಿಂದ ತೆಗೆಯುವ ಮಾತೇ ಇಲ್ಲ: ಸಚಿವ ಬಿ.ಸಿ. ಪಾಟೀಲ್ | ಜನತಾ ನ್ಯೂಸ್
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನ ಕೃಷಿ ಇಲಾಖೆಯ ರಾಯಭಾರಿ ಸ್ಥಾನದಿಂದ ತೆಗೆಯುವ ಮಾತೇ ಇಲ್ಲ ಅಂತಾ ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.
ದರ್ಶನ್ ವಿರುದ್ಧ ಹಲ್ಲೆ ಆರೋಪ ಕೇಳಿ ಬರುತ್ತಿದ್ದಂತೆ ಕೃಷಿ ರಾಯಭಾರಿ ಸ್ಥಾನದಿಂದ ಅವರನ್ನ ರಿಮೂವ್ ಮಾಡಬೇಕು ಅನ್ನೋ ಆಗ್ರಹಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಸಿ ಪಾಟಿಲ್.. ನಟ ದರ್ಶನ್ ಒಳ್ಳೆಯ ವ್ಯಕ್ತಿ, ಬಹಳ ಕಷ್ಟದಿಂದ ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ.
ಅವರ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಹೊಸಬರನ್ನು ಚಿತ್ರರಂಗದಲ್ಲಿ ಪ್ರೋತ್ಸಾಹಿಸುತ್ತಾರೆ. ದರ್ಶನ್ ಪ್ರೋತ್ಸಾಹ ಮಾಡ್ತಿದ್ದಾರೆ. ಯಾವುದೇ ಕಾರಣಕ್ಕೂ ದರ್ಶನ್ರನ್ನು ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ಕೈ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪೋಲೀಸ್ ಇಲಾಖೆ ಯಾರ ಕೈನಲ್ಲೂ ಇಲ್ಲ. ಅವರ ಕೆಲಸ ಅವರು ಮಾಡುತ್ತಾರೆ. ರೆಕ್ಕೆಪುಕ್ಕ ಹುಟ್ಟಿಕೊಳ್ಳುತ್ತವೆ ಎಂಬ ಮಾತಿಗೆ ತಲೆ ಕಡೆಯುವೆ ಅಂದಿದ್ದಾರೆ ಅಷ್ಟೆ. ಅದು ಯಾರನ್ನೂ ಗಮನದಲ್ಲಿಟ್ಟುಕೊಂಡು ಹೇಳಿದ ಮಾತಲ್ಲ ಎಂದು ದರ್ಶನ್ ಹೇಳಿಕೆಯನ್ನು ಸಮರ್ಥಿಸಿಕೊಂಡರು.