ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ, ರಾಜ್ಯಪಾಲರನ್ನ ಭೇಟಿಯಾದ ಸುಮಲತಾ ಅಂಬರೀಶ್ | ಜನತಾ ನ್ಯೂಸ್
ಬೆಂಗಳೂರು : ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ ಕ್ರಮಕ್ಕೆ ಮನವಿ ಮಾಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ, ರಾಜ್ಯಪಾಲರು ಹೊಸದಾಗಿ ಬಂದಿದ್ದು ಭೇಟಿ ಮಾಡಿ ಶುಭಾಶಯ ಕೋರಿದ್ದೇನೆ.
ಅಕ್ರಮ ಗಣಿಗಾರಿಕೆಯ ದುಷ್ಪರಿಣಾಮದ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿರುವೆ ಎಂದರು. ಅಕ್ರಮ ಗಣಿಗಾರಿಕೆಯ ಪರಿಣಾಮಗಳ ಬಗ್ಗೆ ತಿಳಿಸಿದ್ದೇನೆ. ಮೆಮೋರಾಂಡಮ್ ಕೊಟ್ಟಿದ್ದೇನೆ. ಸರ್ಕಾರಕ್ಕೆ ಮಾಹಿತಿ ತಿಳಿಸೋದಾಗಿ ರಾಜ್ಯಪಾಲರು ಭರವಸೆ ಕೊಟ್ಟಿದ್ದಾರೆ ಎಂದು ಹೇಳಿದರು.
ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸುಮಲತಾ, ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ಜಗಳದ ಬಗ್ಗೆ ಗೊತ್ತಿಲ್ಲ. ಅನಾವಶ್ಯಕ ಹೇಳಿಕೆ ಕೊಡುವುದು ಸರಿಯಲ್ಲ, ಆ ಕುರಿತು ಮಾತನಾಡಲು ಇಷ್ಟವಿಲ್ಲ. ಮೈಸೂರು ಹೋಟೆಲ್ನಲ್ಲಿ ಹಲ್ಲೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರ ಸತ್ಯಾಂಶ ಹೊರಬರಲಿದೆ ಎಂದರು.