ಹೈ ಕಮಾಂಡ್ನಿಂದ ಇನ್ನೂ ಸಂದೇಶ ಬಂದಿಲ್ಲ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್
ಬೆಂಗಳೂರು : ಬೆಳಗಾವಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮರಳಿ ಬೆಂಗಳೂರಿಗೆ ಬಂದಿದ್ದು ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬಿಎಸ್ವೈ, ಇದುವರೆಗೂ ಹೈಕಮಾಂಡ್ನಿಂದ ಯಾವುದೇ ಸಂದೇಶ ಬಂದಿಲ್ಲ.
ನಾಳೆ ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ. ನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು.
ಹೈಕಮಾಂಡ್ ನಿಂದ ಇನ್ನೂ ಸಂದೇಶ ಬಂದಿಲ್ಲ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬರಬಹುದು. ಏನ್ ಸಂದೇಶ ಬರುತ್ತದೆಯೋ ಎಂಬುದನ್ನು ನಾಳೆಯವರೆಗೆ ಕಾದು ನೋಡೋಣ. ಅಲ್ಲಿಯವರೆಗೆ ನನ್ನ ಕೆಲಸ ನಾ ಮಾಡುತ್ತೇನೆ ಎಂದರು.
ಸಿಎಂ ಆಗಿ ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ರಾಜೀನಾಮೆ ಕೊಡಿ ಅಂದ್ರೆ ಕೊಡ್ತೀನಿ. ಇನ್ನೂ 10-15 ವರ್ಷ ಪಕ್ಷಕ್ಕಾಗಿ ದುಡಿಯುತ್ತೇನೆ. ಕೋನೇ ಕ್ಷಣದವರೆಗೆ ಕೆಲಸ ಮಾಡುತ್ತೇನೆ. ಇನ್ನೂ ಹತ್ತು, ಹದಿನೈದು ವರ್ಷ ಪಕ್ಷದ ಕೆಲಸ ಮಾಡ್ತೀನಿ ಎಂದರು.