ನೆರೆ ಪರಿಹಾರ: ಕೇಂದ್ರದಿಂದ ಕರ್ನಾಟಕಕ್ಕೆ 629.03 ಕೋಟಿ ರೂ. ಪರಿಹಾರ ಘೋಷಣೆ | ಜನತಾ ನ್ಯೂಸ್
ನವದೆಹಲಿ : ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ನಿದ್ದೆಗೆಡಿಸುವಂತೆ ಸುರಿದ ಮಳೆಯು ಪ್ರವಾಹ, ಭೂ ಕುಸಿತ, ಬೆಳೆ ನಾಶಕ್ಕೆ ಕಾರಣವಾಗಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿದ ಕಾರಣ ಹಲವೆಡೆ ವಸತಿ ಪ್ರದೇಶಕ್ಕೆ ನೀರುನುಗ್ಗಿ ಮನೆಗಳು ಜಲಾವೃತಗೊಂಡು ಜನರು ಸಾಕಷ್ಟು ಸಮಸ್ಯೆ ಅನುಭವಿಸಿದ್ದಾರೆ. ಮಹಾರಾಷ್ಟ್ರ ಸೇರಿದಂತೆ ಕರ್ನಾಟಕಕ್ಕೂ ರಾಜ್ಯ ವಿಪತ್ತು ಪರಿಹಾರ ನಿಧಿ ( SDRF) ಅಡಿಯಲ್ಲಿ ಪರಿಹಾರ ಹಣ ಘೋಷಿಸಲಾಗಿದೆ.
ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ ಹಾಗೂ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ 629 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಜತೆಗೆ ಮಹಾರಾಷ್ಟ್ರಕ್ಕೆ 701 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಎಸ್ಡಿಆರ್ಎಫ್ ಮಾನದಂಡಗಳ ಅಡಿಯಲ್ಲಿ ಅತಿವೃಷ್ಟಿ ಪರಿಹಾರ (Flood relief fund) ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
2020 ರಲ್ಲಿ ರಾಜಸ್ತಾನದಲ್ಲಿ ಅನಾವೃಷ್ಠಿಗೆ ತುತ್ತಾದ ರೈತರಿಗೆ ನೆರವು ನೀಡಲು ಎಸ್ಡಿಆರ್ಎಫ್ಗೆ 113 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.
2020-21 ರ ರಾಭಿ ಮತ್ತು ಖಾರೀಪ್ ಅವಧಿಯಲ್ಲಿ ಬೆಳೆ ನಷ್ಟ ಅನುಭವಿಸಿದ ಮಹಾರಾಷ್ಟ್ರದ 11.43 ಲಕ್ಷ ರೈತರಿಗೆ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 750 ಕೋಟಿ ಬೆಳೆವಿಮೆ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಸದಾ ಸಿದ್ಧ ಎಂದು ಅವರು ಟ್ವೀಟ್ ಮಾಡಿದ್ದಾರೆ.
PM Sri @narendramodi Ji led govt has approved the below central assistance under SDRF for the crop damages occured due to excessive rainfall in Karnataka & Maharashtra in the year of 2020.
— Shobha Karandlaje (@ShobhaBJP) July 27, 2021
• Karnataka- ₹629.03Cr
• Maharashtra- ₹701.00Cr @nstomar @KailashBaytu @AgriGoI
1/3