ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ನೇಮಕ: ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ | ಜನತಾ ನ್ಯೂಸ್
ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಅವರ ರಾಜೀನಾಮೆಯ ನಂತರ ತೆರವಾದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಚರ್ಚೆ ಇಲ್ಲದೆ ಬೊಮ್ಮಾಯಿ ಹೆಸರನ್ನು ಘೋಷಣೆ ಮಾಡಲಾಗಿದ್ದು, ಇದಕ್ಕೆ ಗೋವಿಂದ ಕಾರಜೋಳ ಅನುಮೋದನೆ ನೀಡಿದ್ದಾರೆ.
ನಾಳೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ನಾಳೆ ಮಧ್ಯಾಹ್ನ 1.20ಕ್ಕೆ ಬಸವರಾಜ್ ಬೊಮ್ಮಾಯಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
RELATED TOPICS:
English summary :Karnataka Next Chief Minister Basavaraj Bommai