ರಾಜ್ಯದಲ್ಲಿ 1,531 ಪ್ರಕರಣ ಪತ್ತೆ, ಕೊರೋನಾಗೆ 19 ಬಲಿ! | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 1,531 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,99,195 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 19 ಜನರ ಸಾವು ಸಂಭವಿಸಿದೆ. ಇದರೊಂದಿಗೆ ಸಾವಿನ ಸಂಖ್ಯೆ 36,456ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 376 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,25,957ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,430 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,40,147ಕ್ಕೆ ಏರಿಕೆಯಾಗಿದೆ. ಇನ್ನು 22,569 ಸಕ್ರೀಯ ಪ್ರಕರಣಗಳಿವೆ.
ಬಾಗಲಕೋಟೆ 3, ಬಳ್ಳಾರಿ 7, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 376, ಬೀದರ್ 2, ಚಾಮರಾಜನಗರ 29, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 51, ಚಿತ್ರದುರ್ಗ 18, ದಕ್ಷಿಣ ಕನ್ನಡ 337, ದಾವಣಗೆರೆ 15, ಧಾರವಾಡ 3, ಹಾಸನ 97, ಹಾವೇರಿ 2, ಕಲಬುರಗಿ 19, ಕೊಡಗು 78, ಕೋಲಾರ 9, ಮಂಡ್ಯ 38, ಮೈಸೂರು 93, ರಾಯಚೂರು 1, ಶಿವಮೊಗ್ಗ 86, ತುಮಕೂರು 39, ಉಡುಪಿ 109, ಉತ್ತರ ಕನ್ನಡ 57, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದೆ. ದಕ್ಷಿಣ ಕನ್ನಡ 5, ಬೆಂಗಳೂರು ಗ್ರಾಮಾಂತರ, ಉಡುಪಿ ಜಿಲ್ಲೆಯಲ್ಲಿ ತಲಾ 2, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ.