ಉತ್ತರ ಕನ್ನಡ ಪ್ರವಾಹ: ನೊಂದವರಿಗೆ ಶೀಘ್ರ ಪರಿಹಾರ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ | ಜನತಾ ನ್ಯೂಸ್
ಉತ್ತರ ಕನ್ನಡ : ಉತ್ತರ ಕನ್ನಡದಲ್ಲಿ ಈ ವರ್ಷ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರದಂದು ಜಿಲ್ಲೆಗೆ ಭೇಟಿ ನೀಡಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದರು.
ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟಲು ಅಸಾಧ್ಯವಾಗಿದೆ. ಹೀಗಾಗಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ , ಭಾಗಶಃ ಬಿದ್ದ ಮನೆಗಳಿಗೆ ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ಪರಿಹಾರವನ್ನು ಸಿಎಂ ಘೋಷಿಸಿದರು. ಎಂದು ಸಿಎಂ ಆದೇಶಿಸಿದರು. ಜತೆಗೆ ಕಳಚೆ ಗ್ರಾಮಸ್ಥರ ಪುರ್ವಸತಿಗೆ 15 ಎಕರೆ ಜಮೀನು ಹುಡುಕಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ , ಘಟ್ಟ ಕುಸಿದ ಸ್ಥಳ ರಿಪೇರಿಗೆ 10 ಕೋಟಿ ಘೋಷಿಸಿದರು.
ಇನ್ನು ಸುಫಾ ಕದ್ರಾ ಕೆಪಿಸಿ ಹಾಗೂ ಜಿಲ್ಲಾಡಳಿತ ಸಮನ್ವಯತೆಯಿಂದ ಹಂತ ಹಂತವಾಗಿ ನೀರು ಬಿಡಿ ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ ಘಟ್ಟ ಕುಸಿದ ರಿಪೇರಿಗೆ ೧೦ ಕೋಟಿ ವೆಚ್ಚದಲ್ಲಿ ಸುಧಾರಿಸಿ. 6000 ಮೀನುಗಾರರಿಗೆ ವ್ಯಾಕ್ಸಿನೇಷನ್ ಕ್ಯಾಂಪ್ ಮಾಡಿ. ರೈತರ ಬೆಳೆ ಹಾನಿ ಪರಿಹಾರಕ್ಕೆ ಕ್ರಮ ಕೈಕೊಳ್ಳತ್ತೇನೆ. ನೆರೆ ಪರಿಹಾರ ತಕ್ಷಣ ನೀಡಿ ಎಂದು ಜಿಲ್ಲಾಧಿಕಾರಿ ಮುಗಿಲನ್ ಗೆ ಸಿಎಂ ಬೊಮ್ಮಾಯಿ ಸೂಚಿಸಿದರು.
ಎನ್ಡಿಆರ್ಎಫ್ ನಿಯಮದಂತೆ ಆರೈಕೆ ಕೇಂದ್ರದಲ್ಲಿನ ಜನರಿಗೆ 3800 ಪರಿಹಾರವನ್ನು ಕಳೆದ ವರ್ಷ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಉಳಿದ 6200 ರೂ. ಹಣವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿದ್ದ ಮನೆಗಳ ಸರ್ವೆ ನಡೆಸಿ ಕಳೆದ ವರ್ಷದ ಮಾದರಿಯಲ್ಲಿಯೇ ಪರಿಹಾರ ನೀಡಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ತಿಳಿಸಿದರು.
ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಬಳಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವೆಡೆ ಊರುಗಳೇ ನೆರೆಯ ಹೊಡೆತಕ್ಕೆ ಸಿಲುಕಿವೆ. ಗುಡ್ಡಗಳು ಕುಸಿದು ಮನೆಗಳೇ ನೆಲಸಮವಾಗಿವೆ. ದಾರಿಗಳು ಹಾಳಾಗಿದ್ದು, ನಲುಗಿ ಹೋದ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ಕಾರ್ಯ ಆಗಬೇಕಾಗಿದೆ ಎಂದು ಹೇಳಿದ್ದಾರೆ.
ಸದ್ಯ ಎನ್.ಡಿ.ಆರ್.ಎಫ್ ನಿಧಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಿಂದ ಉಂಟಾದ ಹಾನಿಯ ಸಮೀಕ್ಷೆ ನಡೆಸಿ, ನಂತರ ಹೆಚ್ಚಿನ ಅನುದಾನ ಕೇಳಲಾಗುವುದು ಎಂದರು. ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ ಇತರರಿದ್ದರು.