ಆಗುಂಬೆ ಘಾಟ್ನಲ್ಲಿ ತಡೆಗೋಡೆಗೆ ಢಿಕ್ಕಿಯಾಗಿ ಪ್ರಪಾತಕ್ಕೆ ಮುಖ ಮಾಡಿ ನಿಂತ ಲಾರಿ | ಜನತಾ ನ್ಯೂಸ್
ಶಿವಮೊಗ್ಗ : ಶಿವಮೊಗ್ಗ-ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೂದಲೆಳೆಯ ಅಂತರದಲ್ಲಿ ಭಾರಿ ದುರಂತ ತಪ್ಪಿದೆ.
ಭತ್ತ ತುಂಬಿದ್ದ ಲಾರಿ ಶಿವಮೊಗ್ಗದಿಂದ ಹೆಬ್ರಿಗೆ ತೆರಳುತ್ತಿತ್ತು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಮುನ್ನುಗ್ಗಿದೆ.
ಕ್ಯಾಂಟರ್ ಲಾರಿಯ ಮುಂದಿನ ಚಕ್ರಗಳು ಪ್ರಪಾತದ ಕಡೆಗೆ ಮುಖ ಮಾಡಿವೆ. ತಡೆಗೋಡೆಯ ಕಲ್ಲುಗಳು ಲಾರಿಯ ಛಾಸಿಗೆ ತಾಗಿದ್ದರಿಂದ ಲಾರಿ ನಿಂತಿದೆ. ಕ್ಯಾಂಟರ್ನಲ್ಲಿ ಭತ್ತದ ಲೋಡ್ ಇದ್ದಿದ್ದರಿಂದ ಲಾರಿ ಪ್ರಪಾತಕ್ಕೆ ಧುಮಕಿದೆ ನಿಂತಿದೆ. ಚಾಲಕ ಹಾಗೂ ಕ್ಲಿನರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಕ್ಷಣೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.