ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ "ಹೊಸ ಶಿಷ್ಯವೇತನ" ಜಾರಿಗೊಳಿಸಿ ಆದೇಶ, ಇಲ್ಲಿದೆ ವಿವರ! | ಜನತಾ ನ್ಯೂಸ್
ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಶಿಷ್ಯವೇತನ ಯೋಜನೆ ಘೋಷಣೆ ಮಾಡಿದ್ದರು. ಇಂತಹ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದು, ಸಚಿವ ಸಂಪುಟದ ನಿರ್ಣಯದ ಹಿನ್ನಲೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಮತ್ತು ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲು ಯೋಜನೆಯ ರೂಪುರೇಷೆಗಳನ್ನು ರಚಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪಿಯುಸಿ ಐಟಿಐ ಡಿಪ್ಲೋಮಾ ಓದುವ ರೈತ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ₹ 2500, ವಿದ್ಯಾರ್ಥಿನಿಯರಿಗೆ ₹ 3000,
ಬಿಎ, ಬಿಎಸ್ಸಿ, ಬಿಕಾಂ ಪದವಿ ಓದುವ ರೈತರ ವಿದ್ಯಾರ್ಥಿಯರಿಗೆ ₹5000, ವಿದ್ಯಾರ್ಥಿನಿಯರಿಗೆ ₹5500 ವಿದ್ಯಾರ್ಥಿ ವೇತನ ನೀಡಲು ಆದೇಶಿಸಲಾಗಿದೆ.
ಎಲ್ಎಲ್ಬಿ, ಪ್ಯಾರಾ ಮೆಡಿಕಲ್, ಬಿಫಾರ್ಮಾ, ನರ್ಸಿಂಗ್ ಕೋರ್ಸ್ ಓದುವ ರೈತರ ಮಕ್ಕಳಲ್ಲಿ ವಿದ್ಯಾರ್ಥಿಗಳಿಗೆ ₹ 7500, ಹುಡುಗಿಯರಿಗೆ ವಿದ್ಯಾರ್ಥಿನಿಯರಿಗೆ ₹8000 ಶಿಷ್ಯವೇತನ ನೀಡಲು ಆದೇಶಿಸಲಾಗಿದೆ.
ಎಂಬಿಬಿಎಸ್, ಬಿಇ, ಬಿಟೆಕ್ ಸೇರಿ ಸ್ನಾತಕೋತ್ತರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಗೆ ₹ 10,000, ವಿದ್ಯಾರ್ಥಿನಿಯರಿಗೆ ₹ 11,000 ಪ್ರೋತ್ಸಾಹ ಧನ ನೀಡಲು ಪ್ರಕಟಿಸಲಾಗಿದೆ.
ಎಸ್ ಎಸ್ ಎಲ್ ಸಿ ಅಥವಾ 10ನೇ ತರಗತಿಯನ್ನು ಪೂರ್ಣಗೊಳಿಸಿದ ನಂತ್ರ, ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ ಗಳ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಪದ್ದತಿಯ ಮೂಲಕ 2021-22ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ಈ ಮುಂದಿನ ಪಟ್ಟಿಯಲ್ಲಿ ವಿವರಿಸಿರುವಂತೆ ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಕ್ಷವೇತನ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರ ಅನುಮೋದನೆಯನ್ನು ನೀಡಲಾಗಿದೆ.