Sun,May19,2024
ಕನ್ನಡ / English

ಜವಾಬ್ದಾರಿ ಮರೆತ ಸಚಿವರು, ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ, ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು! | ಜನತಾ ನ್ಯೂಸ್

09 Aug 2021
2189

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಸಚಿವರು ಜಿಲ್ಲೆಗಳಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೊವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಹೊಸ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು, ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ಹಾಗಾಗಿ, ಸಚಿವವರಿಗೆ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ, ಸೇವೆ ನೀಡಲು ಎಂಬುವುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಹೆಚ್​ಡಿಕೆ ಹೇಳಿದ್ದಾರೆ.

RELATED TOPICS:
English summary :HDK

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...