Sun,Apr28,2024
ಕನ್ನಡ / English

ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟ್ಯಾಂಪ್‍ನಂತೆ: ಸಿದ್ದರಾಮಯ್ಯ | ಜನತಾ ನ್ಯೂಸ್

09 Aug 2021
2598

ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಹೋಗಿ ಇನ್ನೊಬ್ಬರು ಹೊಸ ಮುಖ್ಯಮಂತ್ರಿ ಬಂದಿದ್ದಾರೆ. ಅವರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಕಾರಣ ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟ್ಯಾಂಪ್‍ನಂತೆ. ಈಗ ಕಾಲ ಕೂಡಿ ಬರುತ್ತಿದೆ, ವ್ಯವಸ್ಥೆ ಹದಗೊಳ್ಳುತ್ತಿದೆ. ನಾವೆಲ್ಲಾ ಹೋರಾಟದ ಮನೋಭಾವದಿಂದ, ಒಟ್ಟಾಗಿ ಬಿಜೆಪಿಯನ್ನು ತೊಲಗಿಸಲು ಸಾಧ್ಯ ಎಂದಿದ್ದಾರೆ.

ಕ್ವಿಟ್ ಇಂಡಿಯಾ ಚಳವಳಿ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ನೆರವೇರಿತು. ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಆರ್.ವಿ.ದೇಶಪಾಂಡೆ, ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಭಾಗಿಯಾಗಿದ್ದರು.

ಸ್ವತಂತ್ರ ಭಾರತದಲ್ಲಿ ಮೋದಿ ಅವರಷ್ಟು ಸುಳ್ಳು ಹೇಳಿದ ಪ್ರಧಾನಿ ಯಾರೂ ಇಲ್ಲ. ಸಾವರ್ಕರ್ ಅವರಿಂದ ಹಿಡಿದು ಭಾರತೀಯ ಜನತಾ ಪಕ್ಷದ ಯಾವೊಬ್ಬ ನಾಯಕನೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ. ತ್ಯಾಗ ಬಲಿದಾನಕ್ಕೆ ಇನ್ನೊಂದು ಹೆಸರು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ತೊರೆದು ಹೋದವರು ಸೈದ್ಧಾಂತಿಕ ಬದ್ಧತೆಯಿಲ್ಲದವರು. ಇಂದು ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ದೇಶದಲ್ಲಿ ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ ಎಂಬುದು ನನ್ನ ಭಾವನೆ. ಕರ್ನಾಟಕದಲ್ಲಿಯೂ ಬಿಜೆಪಿಯನ್ನು ತೊಲಗಿಸಲು ಸ್ವತಂತ್ರವಾಗಿ ಪ್ರಯತ್ನಿಸೋಣ. ಈ ದಿನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸುತ್ತಾ, ಅವರ ತ್ಯಾಗ, ಬಲಿದಾನಗಳನ್ನು ನಮ್ಮ ಎಲ್ಲ ಹೋರಾಟಗಳಿಗೆ ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸ್ವಾತಂತ್ರ್ಯ ಬರುವುದಕ್ಕೂ ಮೊದಲೇ ನಾನು ಹುಟ್ಟಿದ್ದೇನೆ. ಸ್ವಾತಂತ್ರ್ಯ ಬಂದಮೇಲೆ ನರೇಂದ್ರ ಮೋದಿ ಹುಟ್ಟಿದ್ದು. ನಾನು ಪ್ರಧಾನಮಂತ್ರಿ ಮೋದಿಗಿಂತ ಸೀನಿಯರ್ ಗೊತ್ತಾ. ಕಾಂಗ್ರೆಸ್ ಪಕ್ಷಕ್ಕೆ 60 ವರ್ಷ ಅಧಿಕಾರ‌ ಕೊಟ್ಟಿದ್ದೀರಾ. ನಮಗೆ 60 ತಿಂಗಳು‌ ಕೊಡಿ ಎಂದು ಮೋದಿ‌ ಹೇಳಿದ್ದರು. 7 ವರ್ಷದಲ್ಲಿ ಏನಾದರೂ ಬದಲಾವಣೆ ಆಗಿದೆಯಾ? ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಜಿಡಿಪಿ ಮೈನಸ್ ಆಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸಾಧನೆ. ಜನರ ಲಿವಿಂಗ್ ಕಾಸ್ಟ್ ಹೆಚ್ಚಿದೆ, ಉದ್ಯೋಗ ಹೋಗಿದೆ. ಹೀಗಾದ್ರೆ ಸಾಮಾನ್ಯ ಜನರು ಹೇಗೆ ಬದುಕಬೇಕು. ಮೋದಿ, ಬಿಜೆಪಿಯವರಷ್ಟು ಸುಳ್ಳುಗಾರರು ಬೇಱರೂ ಇಲ್ಲ. ವಲಸೆ ಹೋದವರೆಲ್ಲ ನಿಜವಾದ ಕಾಂಗ್ರೆಸ್ಸಿಗರಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

RELATED TOPICS:
English summary :Siddaramaiah

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...