ಎಸ್ಎಸ್ಎಲ್ಸಿ ಫಲಿತಾಂಶ: ಒಟ್ಟಿಗೆ ಬರೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಅಮ್ಮ-ಮಗ ಇಬ್ಬರೂ ಉತ್ತೀರ್ಣ! | ಜನತಾ ನ್ಯೂಸ್
ಹಾಸನ : ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ-ಮಗ ಇಬ್ಬರೂ ಉತ್ತೀಣರಾಗಿದ್ದಾರೆ. ಹಾಸನ ಜಿಲ್ಲಾಯ ಸಕಲೇಶಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸಿ.ಎನ್.ತೀರ್ಥ ಹಾಗೂ ಅವರ ಮಗ ಬಿ.ಆರ್.ಹೇಮಂತ್ ಉತ್ತೀರ್ಣರಾದ ತಾಯಿ ಮಗ.
ಕಳೆದ ಜುಲೈ 29 ಮತ್ತು 31ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಕಲೇಶಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಸಿ.ಎನ್.ತೀರ್ಥ ಮತ್ತು ಅವರ ಮಗ ಬಿ.ಆರ್.ಹೇಮಂತ್ ಇಬ್ಬರೂ ಬಾಳ್ಳುಪೇಟೆಯ ರಂಗನಾಥ ಪ್ರೌಢಶಾಲೆಯಲ್ಲಿ ಬರೆದಿದ್ದರು.
ಎಂಟನೇ ತರಗತಿ ಓದುತ್ತಿರುವಾಗಲೇ ತೀರ್ಥ ಅವರು ಅರ್ಧಕ್ಕೆ ಶಾಲೆ ಬಿಟ್ಟಿದ್ದರು. ಬಳಿಕ ಮದುವೆ ಆಗಿತ್ತು. ತೀರ್ಥ ಅವರ ಮಗ ಹೇಮಂತ್, ವಳಲಹಳ್ಳಿ ಗ್ರಾಮದ ಶ್ರೀ ಮಲ್ಲೇಶ್ವರ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ.
8ನೇ ತರಗತಿಯನ್ನು ಅರ್ಧಕ್ಕೆ ನಿಲ್ಲಿಸಿದ್ದ ತೀರ್ಥ ಅವರು ಬಾಳ್ಳುಪೇಟೆ ರಂಗನಾಥ ಪ್ರೌಢಶಾಲೆ ಶಾಲೆಯಲ್ಲಿ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದರು. ವಳಲಹಳ್ಳಿ ಮಲ್ಲೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಬಿ.ಆರ್.ಹೇಮಂತ್ 562 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾನೆ. ಅಮ್ಮ 235 ಅಂಕ ಪಡೆದು ಪಾಸಾಗಿದ್ದಾರೆ.