ಕೆ.ಎಸ್ ಈಶ್ವರಪ್ಪಗೆ ಸಂಸ್ಕಾರ, ಸಂಸ್ಕೃತಿ ಎರಡು ಇಲ್ಲ; ಮಾಜಿ ಸಿಎಂ ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಸಚಿವ ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈಶ್ವರಪ್ಪ ಆರೋಗ್ಯಕರ ಮನಸ್ಥಿತಿ ಹೊಂದಿಲ್ಲ. ಇವರಿಗೆ ಸಂಸ್ಕಾರ, ಸಂಸ್ಕೃತಿ ಅನ್ನೋದೆ ಇಲ್ಲ ಎಂದು ತಿರುಗೇಟು ನೀಡಿದರು.
ಈಶ್ವರಪ್ಪ ಬಳಸಿದ ಪದ ಯಾರು ಬೇಕಾದರೂ ಬಳಸಬಹುದು. ಸಂಸ್ಕಾರ ಇರುವವರು ಅಂತಹ ಪದ ಬಯಸುವುದಿಲ್ಲ. ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು ಎಂದರು.
ಅವರಿಗೆ ಆರೋಗ್ಯಕರವಾದ ಸಂಸ್ಕೃತಿ ಇಲ್ಲ. ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು. ಈಶ್ವರಪ್ಪರಿಗೆ ಬಿಜೆಪಿ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದರು.
RELATED TOPICS:
English summary :Siddaramaiah