ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಅಡ್ಡಿ ಬರುವುದಿಲ್ಲ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯ | ಜನತಾ ನ್ಯೂಸ್
ಬೆಂಗಳೂರು : ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಅವರು, ರಾಜಕೀಯದಲ್ಲಿ ಮುಂದುವರಿಯಲು ವಯಸ್ಸು ಮುಖ್ಯವಾಗುವುದಿಲ್ಲ. ರಾಜಕೀಯದಲ್ಲಿ ಉತ್ತಮ ಆರೋಗ್ಯ, ಕೆಲಸ ಮಾಡುವ ಉತ್ಸಾಹ ಮುಖ್ಯವಾಗುತ್ತದೆ ಎಂದಿದ್ದಾರೆ..
ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿದ್ದಾರೆ.
ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಸಂಪುಟ ರಚನೆಯಲ್ಲಿ ಮನಸ್ತಾಪ ಇದೆ ಅನ್ನೋದನ್ನು ತೋರಿಸುತ್ತಿದೆ ಎಂದು ಹೇಳಿದ ಅವರು ಸಂಪುಟ ರಚನೆ ವೇಳೆಯೇ ಅಸಮಾಧಾನ ಹೊಗೆಯಾಡುತಿತ್ತು, ಇದೆ ಹೋಗೆ ಮುಂದೊಂದು ದಿನ ಜ್ವಾಲೆಯಾಗಿ ಸ್ಪೋಟಗೊಳ್ಳುವ ಲಕ್ಷಣ ಇದೆ ಎಂದು ಹೇಳಿದರು.