ಕೆಎಸ್ಆರ್ಟಿಸಿ ಬಸ್ಗಳಲ್ಲಿ ಗಾಂಜಾ ಮಾರಾಟ, ಇಬ್ಬರು ಬಿಎಂಟಿಸಿ ನೌಕರರ ಬಂಧನ! | ಜನತಾ ನ್ಯೂಸ್
ಬೆಂಗಳೂರು : ಗಾಂಜಾ ತಂದು ಸರ್ಕಾರಿ ಬಸ್ಗಳಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಬಿಎಂಟಿಸಿ ನೌಕರರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.
ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತರು. ಆರೋಪಿಗಳಿಂದ 9.8 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ವಿಠ್ಠಲ್ ಭಜಂತ್ರಿ ಹಾಗೂ ಶರಣಬಸಪ್ಪ ಬಿಎಂಟಿಸಿಯಲ್ಲಿ ಚಾಲಕ, ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಬಸ್ಗಳಲ್ಲಿ ತಮಗೆ ಮುಕ್ತವಾಗಿ ಓಡಾಡಲು ಇದ್ದ ಅವಕಾಶವನ್ನು ದುರ್ಬಳಕೆ ಮಾಡಿಕೊಂಡಿದ್ದರು.
ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನೇ ಅಡ್ಡೆ ಮಾಡಿಕೊಂಡಿದ್ದ ಆರೋಪಿಗಳು ಕಳೆದ ಮೂರು ವರ್ಷಗಳಿಂದ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದರು.
ಇವರು ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಒಂದು ಕಿಲೋಗ್ರಾಮ್ಗೆ 40ರಿಂದ 50 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 9.8 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಕೇಸು ದಾಖಲಿಸಿಕೊಳ್ಳಲಾಗಿದೆ.