ಸ್ನೇಹಿತನಿಗೆ ತಲೆಗೆ ಕಲ್ಲಿನಿಂದ ಹಲ್ಲೆ ನಡೆಸಿ, ಯುವತಿ ಮೇಲೆ ಗ್ಯಾಂಗ್ ರೇಪ್! | ಜನತಾ ನ್ಯೂಸ್
ಮೈಸೂರು : ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.
ನಿನ್ನೆ ಸಂಜೆ 7ಗಂಟೆ ಸುಮಾರಿಗೆ ಸಂತ್ರಸ್ತ ಯುವತಿ ಲಲಿತಾದ್ರಿಪುರದಲ್ಲಿ ತನ್ನ ಗೆಳೆಯನ ಜೊತೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ಐದಾರು ಮಂದಿಯ ಗ್ಯಾಂಗ್ ಅದೇ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಯುವತಿ ಮೇಲೆ ಅತ್ಯಾಚಾರಕ್ಕೆ ಮುಂದಾದ ಕಾಮುಕರು ಯುವಕನ ಮೇಲೆ ರಾಡ್ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಘಟನೆಯಲ್ಲಿ ಸಂತ್ರಸ್ತ ಯುವತಿ ಜೊತೆಗಿದ್ದ ಯುವಕನಿಗೂ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಯುವಕ ಹಾಗೂ ಯುವತಿಯ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿನಿ ಗೆಳೆಯನ ಹೇಳಿಕೆ: -
"ದುಷ್ಕರ್ಮಿಗಳು ನಮ್ಮ ಜೊತೆ ಗಲಾಟೆ ಮಾಡಿ, ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ," ಎಂದು ಅತ್ಯಾಚಾರ ಸಂತ್ರಸ್ತೆಯ ಗೆಳೆಯ ಹೇಳಿದ್ದಾನೆ.
ನಾನು ನನ್ನ ಸ್ನೇಹಿತೆ ರೌಂಡ್ಸ್ ಬಂದಿದ್ದೆವು. ಈ ವೇಳೆ ಅಲ್ಲೇ ಎಣ್ಣೆ ಹೊಡೆಯುತ್ತಿದ್ದ 5-6 ಜನರು ಗಲಾಟೆ ಶುರು ಮಾಡಿದರು. ಇದರಲ್ಲಿ ಎಲ್ಲರೂ ಕನ್ನಡ ಮಾತಾಡುತ್ತಿದ್ದರು. ಒಬ್ಬ ಮಾತ್ರ ಬೇರೆ ಬಾಷೆ ಮಾತಾಡುತ್ತಿದ್ದ.
ಇದೇ ಸಂದರ್ಭದಲ್ಲಿ ಗಲಾಟೆ ಮಾಡಿದವರು ನನಗೆ ಕಲ್ಲಿನಲ್ಲಿ ತಲೆಗೆ ಹೊಡೆದರು. ಆಗ ನಾನು ಪ್ರಜ್ಞೆ ತಪ್ಪಿ ಬಿದ್ದೆ. ನಂತರ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ರೇಪ್ ಮಾಡಿದರು, ಎಂದು ಯುವಕ ವಿವರಿಸಿದ್ದಾನೆ ಎನ್ನಲಾಗಿದೆ.