Sun,May19,2024
ಕನ್ನಡ / English

ಪ್ರತಿದಿನ 5 ಲಕ್ಷ ಲಸಿಕೆ ನೀಡಲು ತೀರ್ಮಾನ, ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಡಾ ಕೆ ಸುಧಾಕರ್ | ಜನತಾ ನ್ಯೂಸ್

30 Aug 2021
1695

ಬೆಂಗಳೂರು : ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಗಸ್ಟ್ ತಿಂಗಳಲ್ಲಿ ಕರ್ನಾಟಕಕ್ಕೆ 1 ಕೋಟಿ 10 ಲಕ್ಷ ಡೋಸ್​​ ಕರೊನಾ ಲಸಿಕೆ ಬಂದಿದೆ. ಕೇಂದ್ರ ಸರ್ಕಾರ ಮಾತು ಕೊಟ್ಟಂತೆ ಲಸಿಕೆ ಕಳಿಸಿದ್ದಾರೆ. ಇನ್ನು ಮುಂದೆ ಪ್ರತಿದಿನ 5 ಲಕ್ಷ‌ ಲಸಿಕೆ ನೀಡಲು ತೀರ್ಮಾನಿಸಿದ್ದೇವೆ. ಜೊತೆಗೆ, ಪ್ರತಿ ಗುರುವಾರ ಲಸಿಕೆ ಉತ್ಸವ ಮಾಡಲು ನಿರ್ಧರಿಸಿದ್ದು, ಈ ದಿನ 10 ಲಕ್ಷ ಲಸಿಕೆ ನೀಡಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ ಸುಮಾರು 5 ಕೋಟಿ ಕರೊನಾ ಲಸಿಕೆ ಡೋಸ್​ಗಳನ್ನು ನೀಡಲಾಗಿದೆ. ಲಸಿಕಾಕರಣ ಹೆಚ್ಚಿಸಲು ಹೊಸ ಕಾರ್ಯತಂತ್ರ ರೂಪಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ಲಸಿಕಾ ಅಭಿಯಾನ ಯಶಸ್ವಿಯಾಗಲು ಸರ್ಕಾರದ ಜತೆ ಜನ ಕೈಜೋಡಿಸಬೇಕು ಎಂದರು.

ವಾರದಲ್ಲಿ ಒಂದು ದಿನ ಬುಧವಾರ ಲಸಿಕಾ ಉತ್ಸವ ನಡೆಸಿ ಈ ಪ್ರಮಾಣವನ್ನು 5 ದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗುವುದು. ಇದರಿಂದ ಒಂದೂವರೆಯಿಂದ ಎರಡು ಕೋಟಿ ಲಸಿಕೆಯನ್ನು ಒಂದು ತಿಂಗಳಲ್ಲಿ ನೀಡಬಹುದು. ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ನಗರ ಬೆಂಗಳೂರು ಆಗಬೇಕು ಎಂಬ ಗುರಿ ಇದೆ ಎಂದರು.

ಬೆಂಗಳೂರಿನಲ್ಲಿ ಶೇಕಡ 27 ರಷ್ಟು ಎರಡನೇ ಡೋಸ್ ನೀಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಲಸಿಕೆ ನೀಡುವುದು ಹಿನ್ನಡೆಯಾಗಿದ್ದು ಆ ಕಡೆ ಹೆಚ್ಚು ಗಮನ ಹರಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಸ್ಲಂ ಪ್ರದೇಶದಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಗಡಿಭಾಗದ ಜಿಲ್ಲೆಗಳಲ್ಲಿ ಆದ್ಯತೆ ನೀಡಲಾಗಿದೆ. ಗಡಿ ಭಾಗದ ಜಿಲ್ಲೆಗಳ ಹಳ್ಳಿಗಳಲ್ಲಿ ಲಸಿಕೆ ನೀಡಲಾಗುವುದು. ಕೇರಳ ಭಾಗದ 10 ಕಿಲೋಮೀಟರ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಲಸಿಕೆ ಕಡ್ಡಾಯವಾಗಿ ನೀಡಲು ಸೂಚನೆ ಜಾರಿಗೊಳಿಸಲಾಗುವುದು ಎಂದು ಸುಧಾಕರ್ ಹೇಳಿದರು.

RELATED TOPICS:
English summary :Sudhakar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...