ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು | ಜನತಾ ನ್ಯೂಸ್
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಆರೋಪದಲ್ಲಿ ಇಬ್ಬರು ತಹಸೀಲ್ದಾರ್ ಸೇರಿ ಒಟ್ಟು ಐವರ ವಿರುದ್ಧ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
ತಹಶೀಲ್ದಾರ್ ಸಿ.ಎನ್.ಮಂಜುನಾಥ್, ಕೊಟ್ರೇಶ್, ರಾಜಸ್ವ ನಿರೀಕ್ಷಕ ವಿಜಯಕುಮಾರ್, ಗ್ರಾಮಲೆಕ್ಕಿಗ ಎಚ್.ಸುರೇಶ್, ಮೈಸೂರು ವಿಭಾಗದ ಕೆಎಸ್ಆರ್ಟಿಸಿ ಚಾಲಕ ರಾಮಸ್ವಾಮಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ.
ಶಿವಮೊಗ್ಗ ತಾಲ್ಲೂಕು ಬಿ.ಬೀರನಹಳ್ಳಿ ಸಮೀಪದ ತರಗನಹಳ್ಳಿಯ ರಾಮಸ್ವಾಮಿ ಕೆಎಸ್ಆರ್ಟಿಸಿ ಚಾಲಕ ಹುದ್ದೆಗೆ ಸೇರಲು 2012ರಲ್ಲಿ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಪಡೆದಿದ್ದರು.
2013ರಲ್ಲಿ ಕೃಷ್ಣಪ್ಪ ಪರಿಶಿಷ್ಟ ಬೇಡರ ಜಾತಿಗೆ ಸೇರಿದವನೆಂದು ಪ್ರಮಾಣಪತ್ರ ನೀಡಿ ಮೈಸೂರು ಗ್ರಾಮಾಂತರ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ. ಹಾವಾಡಿಗ ಜಾತಿಗೆ ಸೇರಿದವರಾಗಿದ್ದರೂ ಬೇಡ(ಎಸ್ಟಿ) ಜನಾಂಗದವನೆಂದು ಪ್ರಮಾಣಪತ್ರ ನೀಡಿದ್ದ.
ಈ ಕುರಿತು ನಿಗಮವು ಸಿಂಧುತ್ವ ಪ್ರಶ್ನಿಸಿ ಜಿಲ್ಲಾಧಿಕಾರಿಗೆ ಪರಿಶೀಲನೆಗೆ ಒಪ್ಪಿಸಿತ್ತು. ಜಾತಿ ಪರಿಶೀಲನಾ ಸಮಿತಿ ಇದನ್ನು ಕೂಲಂಕಷವಾಗಿ ವಿಚಾರಣೆ ನಡೆಸಿ ಚಾಲಕ ಆರ್.ಕೃಷ್ಣ ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆಂದು ಸಾಬೀತುಪಡಿಸಿತ್ತು. ವಿಚಾರಣೆ ನಡೆಸಿದ ಅಧಿಕಾರಿಗಳು ಜಾತಿ ಪ್ರಮಾಣಪತ್ರ ರದ್ದುಗೊಳಿಸಿದ್ದರು.
ನಂತರ ಸಮಗ್ರ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯಕ್ಕೆ ಈಗ ಐವರ ವಿರುದ್ಧ ಪ್ರಕರಣ ದಾಖಲಿಸಿದೆ.