Mon,May06,2024
ಕನ್ನಡ / English

ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ ಅಪಹರಣ, ಅಪಹರಣಕಾರರ ಬಂಧನ! | ಜನತಾ ನ್ಯೂಸ್

23 Sep 2021
2247

ಬೆಂಗಳೂರು : ಎರಡು ಕೋಟಿ ಹಣಕ್ಕಾಗಿ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಅಪಹರಿಸಿದ್ದ ಅಪಹರಣಕಾರರನ್ನು ಬಂಧಿಸಿ, ಕಿಡ್ನ್ಯಾಪ್ ಆಗಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಕಿಡ್ನ್ಯಾಪ್ ಆಗಿದ್ದ ಟೆಕ್ಕಿ ವಿನೀತ್ ವರ್ಧನ್ ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಸಿನಿಮೀಯ ಶೈಲಿಯಲ್ಲಿ ಕೋರಮಂಗಲ ಪೊಲೀಸರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ವಿನೀತ್ ವರ್ಧನ್​ನ ಕಿಡ್ನ್ಯಾಪ್ ಆಗಿತ್ತು. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಇತ್ತೀಚೆಗೆ ತನ್ನದೇ ಸ್ವಂತ ಕಂಪನಿಯನ್ನು ಹುಟ್ಟು ಹಾಕಿದ್ದ. ಕೆಲಸದ ಸಂಬಂಧ ಪ್ರತಿಷ್ಠಿತ ಕಂಪನಿ ಜತೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದ. ಸೆ. 25 ರಂದು ವಿನೀತ್ ವರ್ಧನ್ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ಹಣ ಬಂದು ಬೀಳುವುದು ಬಾಕಿ ಇತ್ತು.

ಎಣ್ಣೆ ಮಾರ್ಟಿ ಮಾಡುವ ನೆಪದದಲ್ಲಿ ಕೋರಮಂಗಲದಲ್ಲಿರುವ ವಿನೀತ್ ವರ್ಧನ್ ಮನೆಗೆ ಸ್ನೇಹಿತ ಪ್ರಶಾಂತ್ ಮತ್ತು ಸಂತೋಷ್ ಆಗಮಿಸಿದ್ದರು. ಪಾರ್ಟಿ ಮಾಡುವ ನೆಪ ಇಟ್ಟುಕೊಂಡು ಕಾರಿನಲ್ಲಿ ಬಂದಿದ್ದ ಸ್ನೇಹಿತರಿಬ್ಬರು ವಿನೀತ್ ವರ್ಧನ್ ಮನೆಗೆ ಭೇಟಿ ನೀಡಿದ್ದರು. ಮೊದಲಿನಿಂದಲೂ ಸ್ನೇಹಿತರ ಜತೆ ಸೇರಿ ಪಾರ್ಟಿ ಮಾಡುತ್ತಿದ್ದ ವಿನೀತ್ ವರ್ಧನ್‌ಗೆ ಯಾವುದೇ ಅನುಮಾನ ಬಂದಿರಲಿಲ್ಲ.

ಸ್ನೇಹಿತರ ಜತೆ ಪಾರ್ಟಿಗೆ ಎಂದು ಹೋದ ವಿನೀತ್ ಎರಡು ದಿನವಾದರೂ ಮನೆಗೆ ಬಂದಿರಲಿಲ್ಲ. ಅನುಮಾನಗೊಂಡ ಮನೆಯವರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎರಡು ದಿನಕ್ಕೆ ಒಂದೊಂದು ಕಾಲ್ ಮಾಡಿ ಹಣ ನೀಡುವಂತೆ ಹೇಳಿದ್ದರು. ದೂರು ದಾಖಲಾಗಿರುವ ವಿಚಾರ ಆರೋಪಿಗಳಿಗೆ ತಿಳಿಯುತ್ತಿದ್ದಂತೆ ವಿನೀತ್​ನ ಕೊಲೆ ಮಾಡಿ, ನಾವು ಸಾಯುತ್ತೇವೆ ಅಂದಿದ್ದರು. ಎರಡು ದಿನದಲ್ಲಿ ಹಣ ಕೊಡಲಿಲ್ಲ ಅಂದರೆ ನಾವು ಸಾಯುತ್ತೀವಿ, ಅವನನ್ನು ಸಾಯಿಸುತ್ತೇವೆ ಅಂತ ಹೇಳಿದ್ದರು.

ಕಿಡ್ನ್ಯಾಪರ್ಸ್ 50 ಕಿಲೋಮೀಟರ್ ಕ್ರಮಿಸಿ ಫೋನ್ ಕರೆ ಮಾಡಿದ್ದರು. ಫೋನ್ ಕರೆ ಮಾಡಿದ ಬಳಿಕ ಸ್ವಿಚ್ ಆಫ್ ಮಾಡುತ್ತಿದ್ದರು. ಫಾಸ್ಟ್​ಟ್ಯಾಗ್​ ಮೂಲಕ ಕಿಡ್ನ್ಯಾಪರ್ಸ್ ಸುಳಿವು ಪತ್ತೆಯಾಗಿತ್ತು. ಟೆಕ್ಕಿ ವಿನೀತ್‌ನನ್ನು ಕಾರಿನಲ್ಲಿ ಕೂರಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೋರಮಂಗಲ ಪೊಲೀಸರು ಕಾರ್ಯಚರಣೆ ನಡೆಸಿ ಎಡ್ವಿನ್ ಪ್ರಶಾಂತ್, ಸಂತೋಷ್, ಅರಿವೇಗಲನ್ ಬಂಧಿಸಿದ್ದಾರೆ.

RELATED TOPICS:
English summary :Bangalore

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...