ಶೀಲ ಶಂಕಿಸಿ, ಚಾಕುವಿನಿಂದ ಹೆಂಡತಿಯ ಕೊಲೆ! | ಜನತಾ ನ್ಯೂಸ್
ಬೆಂಗಳೂರು : ಶೀಲ ಶಂಕಿಸಿ ಚಾಕುವಿನಿಂದ ಹೆಂಡತಿಯ ಕತ್ತು ಸೀಳಿ ಗಂಡನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
9 ವರ್ಷಗಳ ಹಿಂದೆ ಮದುವೆಯಾಗಿದ್ದ ರೂಪಾ(34), ಕಾಂತರಾಜ್. ಈ ದಂಪತಿಗೆ ಮುದ್ದಾದ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಕಾಂತರಾಜ್ ಜಗಳ ಮಾಡುತ್ತಿದ್ದ.
ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡು ಬಂದಿತ್ತು. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು.
ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ಪತ್ನಿ ರೂಪಾ ಕತ್ತಿಗೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಟ್ಯೂಷನ್ಗೆ ಹೋಗಿದ್ದ ಮಗ ಮನೆಗೆ ವಾಪಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದೆ.
English summary :Bangalore