ಒಂದೇ ಕುಟುಂಬದ ಐವರ ಸಾವು ಪ್ರಕರಣ: 9 ತಿಂಗಳ ಮಗುವನ್ನು ತಾಯಿ ಹತ್ಯೆ ಮಾಡಿರುವುದು ದೃಢ | ಜನತಾ ನ್ಯೂಸ್
ಬೆಂಗಳೂರು : ನಗರದ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 9 ತಿಂಗಳ ಮಗುವನ್ನು ಹತ್ಯೆ ಮಾಡಿರುವುದು ದೃಢವಾಗಿದೆ.
ಮೆಡಿಕಲ್ ರಿಪೋರ್ಟ್ನಲ್ಲಿ ಮಗುವನ್ನು ಕೊಲೆ ಮಾಡಿರುವುದು ದೃಢಪಟ್ಟಿದೆ. ತಾಯಿ ಸಿಂಧೂರಾಣಿಯಿಂದಲೇ 9 ತಿಂಗಳ ಮಗು ಹತ್ಯೆಯಾಗಿದೆ ಎಂದು ಮೆಡಿಕಲ್ ರಿಪೋರ್ಟ್ನಲ್ಲಿ ಸ್ಪಷ್ಟವಾಗಿದೆ.
ಸಂಪಾದಕ ಶಂಕರ್ ಕುಟುಂಬದ 9 ತಿಂಗಳ ಗಂಡು ಮಗು ಸೇರಿ 5 ಮಂದಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೆಡಿಕಲ್ ರಿಪೋರ್ಟ್ ಬ್ಯಾಡರಹಳ್ಳಿ ಪೊಲೀಸರ ಕೈ ಸೇರಿದೆ. ಒಂಬತ್ತು ತಿಂಗಳ ಹಸುಗೂಸನ್ನು ತಾಯಿಯೇ ಕೊಲೆ ಮಾಡಿದ್ದಾಳೆ. ಹಸಿರು ಬಣ್ಣದ ಬಟ್ಟೆಯಿಂದ ಉಸಿರುಗಟ್ಟಿಸಿರುವ ಮಾಹಿತಿ ಲಭ್ಯವಾಗಿದ್ದು, ಪಿಎಂ ರಿಪೋರ್ಟ್ನಲ್ಲಿ ಧೃಡವಾಗಿದೆ. ಮಗುವನ್ನ ಹತ್ಯೆ ಮಾಡಿ ಬಳಿಕ ತಾಯಿ ಸಿಂಧೂರಾಣಿ ನೇಣು ಬಿಗಿದುಕೊಂಡಿದ್ದಾರೆ.
ಮಗುವಿನ ಕೊಲೆ ರಿಪೋರ್ಟ್ ಬಂದ ಹಿನ್ನೆಲೆ ಮತ್ತೊಂದು ಎಫ್ಐಆರ್ ದಾಖಲು ಮಾಡಿಕೊಳ್ಳಲು ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.
ಆತ್ಮಹತ್ಯೆಗೆ ಶರಣಾಗಿದ್ದ ಮಕ್ಕಳು ತನ್ನ ತಂದೆ ಶಂಕರ್ ವಿರುದ್ಧ ದೂರಿದ್ದರು. ಶಂಕರ್ ವಿರುದ್ಧ ಮಕ್ಕಳು ಡೆತ್ನೋಟ್ನಲ್ಲಿ ಆರೋಪಿಸಿದ ಹಿನ್ನೆಲೆ ಶಂಕರ್ಗೆ ಸೇರಿದ ಲ್ಯಾಪ್ಟಾಪ್, ಮೊಬೈಲ್ಗಳನ್ನ ವಶಕ್ಕೆ ಪಡೆಯಲಾಗಿದೆ. ಶಂಕರ್ ಅಳಿಯಂದಿರಿಗೆ ಸೇರಿದ ಮೊಬೈಲ್ ಕೂಡ ವಶಕ್ಕೆ ಪಡೆಯಲಾಗಿದೆ.
ಲ್ಯಾಪ್ಟಾಪ್ನಲ್ಲಿ ಶಂಕರ್ ಚಾಟಿಂಗ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ. ಮಹಿಳೆಯರ ಜತೆ ಚಾಟಿಂಗ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬ್ಯಾಡರಹಳ್ಳಿ ಠಾಣೆ ಪೊಲೀಸರಿಂದ ತನಿಖೆ ಮುಂದುವರಿದೆ.