ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರುಯಾರು?: ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, "ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು" ಎಂದು ಪ್ರಶ್ನಿಸಿ ಬುಧವಾರ ಟ್ವೀಟ್ ಮಾಡಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಸಿ.ಟಿ ರವಿ ಆರ್ಎಸ್ಎಸ್ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.
ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ. ಏನಂತೀರಿ ಟಿಪ್ಪು ಸುಲ್ತಾನ್ ಆರಾಧಕ ಸಿದ್ದರಾಮಯ್ಯನವರೇ? ಎಂದು ಆಕ್ರೋಶ ಹೊರಹಾಕಿದ್ದಾರೆ.
ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು. "ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನ ನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ," ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.
ಕೊನೆಯದಾಗಿ, ನಾನೇನು ಎಂಬುದು ಚಿಕ್ಕಮಗಳೂರಿನ ನನ್ನ ಜನರಿಗೆ, ನನ್ನ ಜೊತೆ ಇರುವ ಕಾರ್ಯಕರ್ತರಿಗೆ ಗೊತ್ತು.
— C T Ravi 🇮🇳 ಸಿ ಟಿ ರವಿ (@CTRavi_BJP) September 29, 2021
ʼಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು ಎಂದು ಮೈಸೂರಿನ ನಾಗರೀಕರು ಈಗಲೂ ಮರೆತಿರಲಿಕ್ಕಿಲ್ಲ. ಒಮ್ಮೆ ಕೇಳಿ ನೋಡಿ ಸಿದ್ದರಾಮಯ್ಯನವರೇ.