Thu,May09,2024
ಕನ್ನಡ / English

ನಾವು ಲಖಿಂಪುರ್ ಖೇರಿ ಘಟನೆಯನ್ನು ಚುನಾವಣೆಯ ದೃಷ್ಟಿಯಿಂದಲ್ಲ, ಮಾನವೀಯ ದೃಷ್ಟಿಕೋನದಿಂದ ನೋಡಬೇಕು - ಜೆಪಿ ನಡ್ಡಾ | ಜನತಾ ನ್ಯೂಸ್

09 Oct 2021
2008

ನವದೆಹಲಿ : ನಾವು ಲಖಿಂಪುರ್ ಖೇರಿ ಘಟನೆಯನ್ನು ಚುನಾವಣೆಯ ದೃಷ್ಟಿಯಿಂದ ನೋಡಬಾರದು, ಆದರೆ ಅದನ್ನು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಇದು ದುರದೃಷ್ಟಕರ ಘಟನೆ, ಮತ್ತು ಬಿಜೆಪಿ ಅಧ್ಯಕ್ಷನಾಗಿ, ಕಾನೂನು ತನ್ನ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಹೇಳುತ್ತೇನೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಅವರು ಇಂಡಿಯಾ ಟುಡೇ ಕಾನ್ಕ್ಲೇವ್ 2021ರಲ್ಲಿ ಮಾತನಾಡುತ್ತಿದ್ದರು.

"ಕಾನೂನನ್ನು ಮೀರಿ ಯಾರೂ ಇಲ್ಲ; ತನಿಖೆಯಲ್ಲಿ ಯಾವುದೇ ಕಲ್ಲನ್ನೂ ತಿರುಗಿಸದೇ ಬಿಡುವುದಿಲ್ಲ", ಎಂದು ಅವರು ಹೇಳಿದರು.

ಲಖಿಂಪುರ್ ಖೇರಿ ಹಿಂಸಾಚಾರದ ಬಗ್ಗೆ ನಡೆಯುತ್ತಿರುವ ವಿವಾದ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ವಾಗ್ದಾಳಿಗಳ ಬೆನ್ನಲ್ಲೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತನಿಖೆಯಲ್ಲಿ ಯಾವುದೇ ಕಲ್ಲನ್ನೂ ತಿರುಗಿಸದೇ ಬಿಡುವುದಿಲ್ಲ, ಎಂದು ಹೇಳಿದ್ದಾರೆ.

"ಒಂದು ಎಸ್‌ಐಟಿಯನ್ನು ರಚಿಸಲಾಗಿದೆ, ಮತ್ತು ಸಾಧ್ಯವಾದಷ್ಟು ಉತ್ತಮವಾದ ತನಿಖೆ ನಡೆಯುತ್ತದೆ. ತನಿಖೆಯಲ್ಲಿ ಯಾವುದೇ ತಪ್ಪನ್ನು ನಾವು ಬಿಡುವುದಿಲ್ಲ" ಎಂದು ಜೆಪಿ ನಡ್ಡಾ ಹೇಳಿದರು.

"ಅಭಿವೃದ್ಧಿಗೊಳ್ಳುತ್ತಿರುವ ಈ ಹೊಸ ಪ್ರತಿಭಟನೆಯ ವಿಧಾನವು ಸಹ ಚಿಂತಾಜನಕವಾಗಿದೆ. ದಾರಿಯಲ್ಲಿ ಕಾರಿನ ಮೇಲೆ ದಾಳಿ ಮಾಡಿದಾಗ ಬಹಳಷ್ಟು ಘಟನೆಗಳು ನಡೆಯುತ್ತವೆ. ನಾನು ಈ ಘಟನೆಯ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಸಾಮಾನ್ಯವಾಗಿ ಹೇಳುತ್ತಿದ್ದೇನೆ. ಸಾರ್ವಜನಿಕ ನಾಯಕರ ಮನೆಗಳ ಮೇಲೆ ಘೇರಾವ್ ಹಾಕಿದ ರೀತಿ. ನಾವು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ವ್ಯವಸ್ಥೆಯನ್ನು ಎಷ್ಟು ದೂರ ತೆಗೆದುಕೊಳ್ಳುತ್ತೇವೆ, ಎಂದು ಕೂಡ ನಾವು ಯೋಚಿಸಬೇಕು. ಕಾನೂನನ್ನು ಯಾರ ಕೈಗೂ ತೆಗೆದುಕೊಳ್ಳಲು ಅವಕಾಶವಿಲ್ಲ, ಮತ್ತು ನ್ಯಾಯವನ್ನು ನೀಡಲಾಗುವುದು, ಎಂದು ಜೆಪಿ ನಡ್ಡಾ ಹೇಳಿದರು.

ರೈತರ ಹೋರಾಟದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರೈತರ ಪರವಾಗಿ ಪ್ರಧಾನಿ ಮೋದಿ ಸರ್ಕಾರ ಮಾಡಿದ್ದಷ್ಟು ಸಾಧನೆ ಇಲ್ಲಿಯ ವರೆಗೆ ಯಾರು ಮಾಡಿಲ್ಲ. ಫಸಲ್ ಬೀಮಾ ಯೋಜನೆ, ರೈತರಿಗೆ ಪೆನ್ಶನ್, ಕಿಸಾನ್ ಸಮ್ಮಾನ್ ಯೋಜನೆ, ದುಪ್ಪಟ್ಟುಗೊಂಡ ಎಂ.ಎಸ್.ಪಿ, ಕಡಿಮೆ ದರದಲ್ಲಿ ರಸಗೊಬ್ಬರ ಸೇರಿದಂತೆ ಅನೇಕ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ರೈತ ಮುಖಂಡರ ಹೆಸರಿನಲ್ಲಿ ರಾಜಕೀಯ ಪ್ರೇರಿತ ಹೋರಾಟ ಎಲ್ಲಾ ಸಮಸ್ಯೆಗೆ ಕಾರಣ ಎಂದಿದ್ದಾರೆ.

RELATED TOPICS:
English summary :We should not see it in election point of view, we should see it in humanity point of view - JP Nadda

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...