Sat,May11,2024
ಕನ್ನಡ / English

ಕುಡಿವ ನೀರಿನ ಟ್ಯಾಂಕಿನಲ್ಲಿ ಮಹಿಳೆಯ ಶವ ಪತ್ತೆ! | ಜನತಾ ನ್ಯೂಸ್

10 Oct 2021
3718

ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ 9, 10, 11 ನೇ ವಾರ್ಡ್ ನ‌ ಸರಿಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ಜನರು ಕೂಡ ಕೊಳೆತ ಶವದ ನೀರನ್ನೇ ಕುಡಿದ್ದಿದ್ದಾರೆ. ಒಂದು ವಾರಗಳ ಕಾಲ ನೀರು ಹಳದಿ ಬಣ್ಣಕ್ಕೆ ತಿರುಗಿದೆ, ಕೆಟ್ಟ ವಾಸನೆ ಬಂದಿದೆ. ಈ ವಿಚಾರವಾಗಿ ಸ್ಥಳೀಯರು ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ಗೆ ದೂರು ನೀಡಿದ್ದಾರೆ.

ನಂತರ ಪರಿಶೀಲನೆ ಮಾಡಿದಾಗ ‌ಕೆಳಭಾಗದಲ್ಲಿ ಇರೋ ಓವರ್ ಹೆಡ್ ಟ್ಯಾಂಕ್ ನ ವಾಲ್ ನಲ್ಲಿ‌ ಮಹಿಳೆಯ ಕಾಲು ಪತ್ತೆಯಾಗಿದೆ. ಮೃತದೇಹದ ಉಳಿದ ಭಾಗಕ್ಕಾಗಿ ಹುಡುಕಾಟ ಮುಂದುವರಿದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ನಗರದ ನ್ಯಾಯಾಲಯ ಹಿಂಭಾಗವಿರುವ ಓವರ್​ಹೆಡ್ ಟ್ಯಾಂಕ್ ನೀರಿನ ಪೈಪ್​ನ​ಲ್ಲಿ ಕೊಳೆತ ಸ್ಥಿತಿಯಲ್ಲಿ ತೊಡೆಭಾಗದಿಂದ ಪಾದದವರೆಗೂ ಕಾಲು ಪತ್ತೆಯಾಗಿದೆ.

ಮಾರುತಿ ಬಡಾವಣೆ, ಕೋಟೆ, ಹಾಗೂ ಕುವೆಂಪು ನಗರಕ್ಕೆ ಕಾವೇರಿ ನೀರು ಪೂರೈಸುವ ಟ್ಯಾಂಕ್ ಇದಾಗಿದ್ದು, ಇದರ ವಾಲ್ವ್​ನಲ್ಲಿ ಶನಿವಾರ ಬೆಳಗ್ಗೆ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ಕಾಲು ಪತ್ತೆಯಾಗಿತ್ತು. ಟ್ಯಾಂಕ್​ನ ಮೇಲ್ಭಾಗದಲ್ಲಿ ಮಹಿಳೆಯ ಬಟ್ಟೆ, ಚಪ್ಪಲಿ ಹಾಗೂ ಛತ್ರಿಯೊಂದು ಸಿಕ್ಕಿದ್ದು, ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿತ್ತು.

ಆದರೆ ವಾಲ್ವ್​ ಓಪನ್ ಮಾಡಿ ನೋಡಿದಾಗ ತೊಡೆಭಾಗದವರೆಗೂ ಒಂದು ಕಾಲು ಮಾತ್ರ ಸಿಕ್ಕಿದ್ದು, ಬೆಳಲ್ಲಿ ಕಾಲುಂಗರ ಕೂಡ ಇದೆ. ಮತ್ತೊಂದು ಕಾಲು, ಸೇರಿ ದೇಹದ ಉಳಿದ ಭಾಗ ಇನ್ನು ಪತ್ತೆಯಾಗಿಲ್ಲ. ಯಾರೋ ಮಹಿಳೆಯನ್ನ ಕೊಲೆ ಮಾಡಿ ದೇಹ ತುಂಡರಿಸಿ ನೀರಿನ ಟ್ಯಾಂಕ್​ಗೆ ಹಾಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಇದರ ಜೊತೆಗೆ ಚೂಡಿದಾರ ಡ್ರೆಸ್, ಚಪ್ಪಲಿ, ಛತ್ರಿ ಸಹ ಪತ್ತೆಯಾಗಿದೆ. ಈ ವಿಚಾರ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು ಕೊಲೆಯಾದ ಮಹಿಳೆಯ ಶವ ಎಂಬ ಅನುಮಾನ ಒಂದೆಡೆಯಾದರೆ, ಪ್ರಕರಣದ ದಿಕ್ಕು ತಪ್ಪಿಸಲು ಬೇರೆಡೆ ಕೊಲೆ ಮಾಡಿ ಕಾಲನ್ನ ತಂದು ಬಿಸಾಡಿರುವ ಶಂಕೆಯೂ ಇದೆ. ಅಥವಾ ಕಾಲು ಸಿಕ್ಕಿ ದೇಹ ಮತ್ತೊಂದೆಡೆ ಹೋಗಿರಬಹುದೆಂದು ಶಂಕೆಯೂ ಸಹ ವ್ಯಕ್ತವಾಗ್ತಿದೆ.

ಟ್ಯಾಂಕ್​ನಿಂದ ಸರಬರಾಜಾಗುವ ನೀರಿನಲ್ಲಿ ವಾಸನೆ ಬರುತ್ತಿದೆ ಎಂದು ಸಂಬಂಧಪಟ್ಟವರ ಗಮನಕ್ಕೆ ತಂದರೂ ಗಮನಹರಿಸಲಿಲ್ಲ. ನೀರಿಗೆ ಮೃತದೇಹ ಬಿದ್ದು ಹಲವು ದಿನಗಳು ಕಳೆದಿದ್ದು, ನೂರಾರು ಮನೆಗಳಿಗೆ ನೀರು ಸರಬರಾಜಾಗಿದೆ. ಅಲ್ಲದೆ ಟ್ಯಾಂಕ್​ನ ಮೇಲ್ಭಾಗಕ್ಕೆ ಬೀಗ ಹಾಕದೇ ಬೇಜವಾಬ್ದಾರಿತನ ತೋರಲಾಗಿದೆ. ಈ ಘಟನೆಗೆ ಕಾವೇರಿ ನೀರು ಸರಬರಾಜು ಮಂಡಳಿ ಹಾಗೂ ನಗರಸಭೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ನೀರನ್ನ ಬಳಕೆ ಮಾಡಿರುವ ಕೆಲವರಲ್ಲಿ ಆರೋಗ್ಯ ವ್ಯತ್ಯಾಸವಾಗಿದ್ದು ಕೆಮ್ಮು, ಜ್ವರ ಕಾಣಿಸಿಕೊಂಡಿದೆ ಎಂಬ ಮಾಹಿತಿ ಇದೇ.

RELATED TOPICS:
English summary :Woman s body parts found in drinking water tank

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...