ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂಸ್
ಬೆಂಗಳೂರು : ತಾನು ಹಿರಿಯ ಐ.ಎ.ಎಸ್ ಅಧಿಕಾರಿ ಎಂದು ಅಮಾಯಕರನ್ನು ವಂಚಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಮಂಡ್ಯ ಮೂಲದ ಸಂದೀಪ್ ಬಂಧಿತ. ತಾನು ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ. ಪ್ರಾಥಮಿಕ ತನಿಖೆ ವೇಳೆ 20ಕ್ಕೂ ಹೆಚ್ಚು ಜನರಿಗೆ ಹಣ ವಂಚಿಸಿರುವುದಾಗಿ ತಿಳಿದು ಬಂದಿದೆ.
ಬೌರಿಂಗ್ ಅಸ್ಪತ್ರೆಯಲ್ಲಿ ಹೊರ ಗುತ್ತಿಗೆ ನೌಕರನಾಗಿದ್ದ ಸಂದೀಪ್ ಅಲ್ಲಿ ಕೆಲಸ ಬಿಟ್ಟಿದ್ದ. ಬಳಿಕ ತಾನು ವಿಧಾನಸೌಧದಲ್ಲಿ ಉನ್ನತ ಹುದ್ದೆಯಲ್ಲಿರುವುದಾಗಿ ಹೇಳಿ ಹಲವು ಜನರಿಗೆ ನಂಬಿಸಿದ್ದ.
ಸದ್ಯ ಈ ಬಗ್ಗೆ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಚಿರಂಜೀವಿ, ಸಂದೀಪ್ ಎಂಬ ವ್ಯಕ್ತಿ ಜಾವೇದ್ ಅಕ್ತರ್ ಹೆಸರಲ್ಲಿ ನಕಲಿ ಸಹಿ ಮಾಡಿ, ನಕಲಿ ಆದೇಶ ಪತ್ರ ನೀಡಿದ್ದಾರೆ ಎಂದು ದೂರು ನೀಡಿದ್ದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ದೂರು ಆಧರಿಸಿ ಆರೋಪಿ ಸಂದೀಪ್ ನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.