ಕೆಆರ್ಎಸ್ನಲ್ಲಿ ಸೆಲ್ಫೀ ತೆಗೆಯಲು ಹೋಗಿ ನದಿಗೆ ಬಿದ್ದ ಪತ್ನಿ! | ಜನತಾ ನ್ಯೂಸ್
ಮಂಡ್ಯ : ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋಗಿ ಮಹಿಳೆಯೊಬ್ಬರು ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಪತಿಯೊಂದಿಗೆ ಮಹಿಳೆ ಡ್ಯಾಂ ವೀಕ್ಷಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಡ್ಯಾಂ ವೀಕ್ಷಣೆ ಮಾಡಿ ವಾಪಸ್ ತೆರಳುವ ವೇಳೆ ಮಹಿಳೆ ಸೇತುವೆ ಮೇಲೆ ಸೆಲ್ಫಿ ಫೋಟೋ ತೆಗೆದುಕೊಳ್ಳಲು ಮುಂದಾಗಿದ್ದರು. ಆದರೆ ಈ ವೇಳೆ ಆಕೆ ಜಾರಿ ನದಿಗೆ ಬಿದ್ದಿದ್ದಾರೆ. ಇದನ್ನು ಕಂಡ ಪತಿ ಕೂಡ ಪತ್ನಿಯನ್ನು ರಕ್ಷಣೆ ಮಾಡಲು ನದಿಗೆ ಹಾರಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಇಬ್ಬರ ರಕ್ಷಣೆಗೆ ಆಗಮಿಸ, ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.
ಸುಮಾರು 50 ಅಡಿ ಕೆಳಗೆ ಬಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕೆಆರ್ಎಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :Mandya