ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಂತಾಪ | ಜನತಾ ನ್ಯೂಸ್
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಾವಿಗೆ ರಾಷ್ಟ್ರದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರೂ ಸಹ ಕಂಬನಿ ಮಿಡಿದಿದ್ದು ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಪ್ರಕಟಿಸಿದ್ದಾರೆ.
"ಶ್ರೀ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಅಗಲಿರುವುದು ಅತ್ಯಂತ ದುರದೃಷ್ಟಕರ. ಅವರ ಕುಟುಂಬಕ್ಕೆ, ಕನ್ನಡ ಚಿತ್ರರಂಗಕ್ಕೆ ಹಾಗು ಕನ್ನಡದ ಜನರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ", ಎಂದು ಉಪರಾಷ್ಟ್ರಪತಿಯವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಪ್ರಕಟಿಸಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಮೋದಿ ತಮ್ಮ ವಿದೇಶ ಪ್ರವಾಸದ ಸಂದರ್ಭದಲ್ಲಿಯೂ ಸಹ ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದರು.
ಇನ್ನೂ ಬಾಲಿವುಡ್ ತಾರೆಯರಾದ ಅಜಯ್ ದೇವಗನ್, ಅಬಿಷೇಕ್ ಬಚ್ಚನ್, ಸಂಜಯ್ ದತ್ತ ಸೇರಿದಂತೆ ಅನೇಕ ಮೇರುನಟರು ದುಖಃವನ್ನು ತೋಡಿಕೊಂಡಿದ್ದಾರೆ.