ಬೈಕ್- ಕೆಎಸ್ಆರ್ಟಿಸಿ ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು | ಜನತಾ ನ್ಯೂಸ್
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿವಮೊಗ್ಗ ನಗರದ ಸಮೀಪದ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿನ ನಂದಿನಿ ಡೈರಿ ಬಳಿಯ ಮಾಚೇನಹಳ್ಳಿಯ ಬಳಿ, ರಸ್ತೆಯ ಹಂಪ್ ಬಳಿ ಬೈಕ್ ಸ್ಲೋ ಮಾಡಿದ್ದರಿಂದಾಗಿ, ಹಿಂಬದಿಯಿಂದ ಬಂದಂತ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಮೃತರನ್ನು ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದೆ. ಈರ್ವರೂ ಭದ್ರಾವತಿ ತಾಲೂಕಿನ ಜಯಂತಿ ನಗರ ಗ್ರಾಮಸ್ಥರಾಗಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ.
RELATED TOPICS:
English summary :Shivamogga