ಭೀಕರ ಅಪಘಾತ: ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಸಾವು | ಜನತಾ ನ್ಯೂಸ್
ಹುಬ್ಬಳ್ಳಿ : ಟ್ರ್ಯಾಕ್ಟರ್ಗೆ ಟ್ಯಾಂಕರ್ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಸಮೀಪದ ಬುಡರಸಿಂಗಿ ಕ್ರಾಸ್ ಬಳಿ ನಡೆದಿದ್ದರ ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಗಲಕೋಟೆಯ ಜಿಲ್ಲೆಯ ಹುನಗುಂದ ತಾಲೂಕಿನ ಕಲ್ಮೇಶ ಯಂಕಮ್ಮನವರ (26) ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅಡವಿ ಸೋಮಾಪುರದ ಕಲ್ಮೇಶ ಜಾಧವ್ (26) ಮೃತರು. ಮುಂಡಗೋಡದ ವಿನಾಯಕ ಮಾನಾಬಾಯಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಟ್ರ್ಯಾಕ್ಟರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಬಾವುಸಾಹೇಬ ಡಾಕನೆ ಎಂಬಾತ ಟ್ಯಾಂಕರ್ ಚಲಾಯಿಸಿಕೊಂಡು ಹಾವೇರಿಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ. ಟ್ಯಾಂಕರ್ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.